‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿವೆ. ಕೆಲ ಯುವಕರ ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಯಶಸ್ವಿಯಾಗಿರುವುದು ಭರವಸೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ ಬಿಡುಗಡೆ ಆದಾಗ ಕೆಲವೇ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದ ಸಿನಿಮಾ, ಕಂಟೆಂಟ್ನಿಂದ ಪ್ರೇಕ್ಷಕರನ್ನು ಸೆಳೆದು ಇದೀಗ ಶೋಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ.
ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ‘ಬ್ಲಿಂಕ್’ ಸಿನಿಮಾಗೆ ಪ್ರಾರಂಭದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿರಲಿಲ್ಲ. ಆರಂಭದ ದಿನಗಳಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು, ಸಿನಿಮಾದ ಬಗ್ಗೆ ಮಾತನಾಡಿ ಆದ ಮೌತ್ ಪಬ್ಲಿಸಿಟಿಯಿಂದ ‘ಬ್ಲಿಂಕ್’ ಶೋಗಳು ಏರಿಕೆಯಾಗುತ್ತಾ ಹೋಯಿತು. ಕನ್ನಡ ಸಿನಿಮಾಗಳಿಗೆ ಶೋ ಸಿಗುತ್ತಿಲ್ಲ ಎಂಬ ಮಾತಿನ ನಡುವೆ 8 ಶೋಗಳಿಂದ 82 ಶೋ ಬ್ಲಿಂಕ್ ಪಾಲಾಗಿದೆ ಎಂಬುದು ಚಿತ್ರತಂಡದ ಹೆಮ್ಮೆ. ‘ಬ್ಲಿಂಕ್’ ಸಿನಿಮಾಕ್ಕೆ ಚಿತ್ರರಂಗದ ಕೆಲವು ಪ್ರಮುಖ ನಟ, ನಟಿಯರು ಸಹ ಬೆಂಬಲ ವ್ಯಕ್ತಪಡಿಸಿದರು. ಸಿನಿಮಾಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆ, ಸಿನಿಮಾದ ಬಗ್ಗೆ ಕೇಳಿ ಬಂದ ಉತ್ತಮ ವಿಮರ್ಶೆಗಳನ್ನು ಗಮನಿಸಿ ಸ್ವತಃ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಬ್ಲಿಂಕ್’ ಸಿನಿಮಾ ನೋಡುವ ಇಂಗಿತ ವ್ಯಕ್ತಪಡಿಸಿದ್ದರು.
ಇನ್ನುಳಿದಂತೆ ಸಿಂಪಲ್ ಸುನಿ, ನವೀನ್ ಶಂಕರ್, ರುಕ್ಮಿಣಿ ವಸಂತ್ ಹಾಗೂ ನಟಿ ಬೃಂದಾ ಆಚಾರ್ ಸೇರಿದಂತೆ ಹಲವಾರು ಕನ್ನಡ ತಾರೆಯರು ‘ಬ್ಲಿಂಕ್’ ಗೆ ಬಹುಪರಾಕ್ ಎಂದಿದ್ದರು.‘ಬ್ಲಿಂಕ್’ ಸಿನಿಮಾದ ಶೋಗಳು ಹೆಚ್ಚಾಗಿರುವ ಖುಷಿ ನಡುವೆಯೇ ಇದೀಗ ಈ ಸಿನಿಮಾ ವಿದೇಶದಲ್ಲಿಯೂ ತೆರೆಕಂಡಿದೆ. ಆಸ್ಟ್ರೇಲಿಯಾ, ಯುಎಸ್ ಹಾಗೂ ಐರ್ಲೆಂಡ್ ಗಳಲ್ಲಿ ‘ಬ್ಲಿಂಕ್’ ಸಿನಿಮಾ ಬಿಡುಗಡೆಯಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಯುಕೆ, ಯೂರೋಪ್ನ ಕೆಲ ದೇಶಗಳು, ನ್ಯೂಜಿಲೆಂಡ್, ಯುಎಸ್, ಸಿಂಗಾಪುರ್, ಮಲೇಷಿಯಾ, ಜರ್ಮನ್, , ಕೆನಡಾ, ಫ್ರಾನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆಯಂತೆ. ಶ್ರೀನಿಧಿ ಬೆಂಗಳೂರು ನಿರ್ದೇಶನದ ‘ಬ್ಲಿಂಕ್’ ಚಿತ್ರಕ್ಕೆ ರವಿಚಂದ್ರ ಎ. ಜೆ ಬಂಡವಾಳ ಹೂಡಿದ್ದು, ‘ದಿಯಾ’ ಖ್ಯಾತಿಕ ದೀಕ್ಷಿತ್ ಶೆಟ್ಟಿ, ಚೈತ್ರಾ ಆಚಾರ್, ಗೋಪಾಲ ದೇಶಪಾಂಡೆ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…