News Karnataka Kannada
Monday, April 29 2024
ಸಾಂಡಲ್ ವುಡ್

ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದ ಕಾರು: ತಪ್ಪಾಯ್ತು ಎಂದು ಕ್ಷಮೆ ಕೋರಿದ ನಟಿ

Car hits sanitation worker, apologises for mistake
Photo Credit : News Kannada

ಬೆಂಗಳೂರು: ಪ್ರತಿವರ್ಷದಂತೆ ಈ ವರ್ಷವೂ ಕೂಡ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ಆಯೋಜಿಸಲಾಗಿರುವ ಫ್ಲವರ್‌ ಶೋಗೆ ಸ್ಯಾಂಡಲ್​ವುಡ್​​ ನಟಿ ರಚಿತಾ ರಾಮ್ ಅತಿಥಿಯಾಗಿ ಆಗಮಿಸಿದ್ದರು. ಲಾಲ್‌ಬಾಗ್‌ಗೆ ಆಗಮಿಸುವ ವೇಳೆ ಸ್ವಚ್ಛತಾ ಕಾರ್ಮಿಕನಿಗೆ ರಚಿತಾ ರಾಮ್ ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅಪಘಾತದಿಂದ ಸ್ವಚ್ಛತಾ ಕಾರ್ಮಿಕ ಪಾರಾಗಿದ್ದರು. ಕಾರು ತುಂಬಾ ನಿಧಾನದಲ್ಲಿ ಪ್ರಯಾಣಿಸುತ್ತಿದ್ದು ಸ್ವಚ್ಛತಾ ಕಾರ್ಮಿಕ ಕಾರನ್ನು ಗಮನಿಸದೇ ಇದ್ದ ಪರಿಣಾಮ ಈ ಘಟನೆ ನಡೆದಿತ್ತು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಕೂಡ ಆಗಿತ್ತು. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ನಟಿ ಹಾಗೂ ಕಾರ್​ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.ಆದರೂ ಈ ಕುರಿತಾಗಿ ನಟಿ ಇಂದು ಕ್ಷಮೆ ಕೇಳಿದ್ದಾರೆ.

ನಾನು ಲಾಲ್​ಬಾಗ್​ ಕಾರ್ಯಕ್ರಮಕ್ಕೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ನನ್ನ ಕಾರು ಅಲ್ಲಿ ಕೆಲಸ ಮಾಡುತ್ತಿದ್ದ ಸ್ವಚ್ಛತಾ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ.ಇದಕ್ಕೆ ನಾನು ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಹಾಗೂ ನನ್ನ ಕಾರ್​ ಚಾಲಕನ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ.ಇದು ನಿನ್ನೆ ನನ್ನ ಗಮನಕ್ಕೆ ಬಂದಿರಲಿಲ್ಲ.ಇಲ್ಲವಾದ್ರೆ ನಿನ್ನೆಯೇ ನಾನು ಕ್ಷಮೆ ಕೇಳುತ್ತಿದ್ದೆ ಎಂದು ಹೇಳಿದ್ದಾರೆ.

ಈಗ ಸಿಬ್ಬಂದಿಯನ್ನು ಮನೆಗೆ ಕರೆದಿದ್ದೇನೆ. ಅವರು ಮನೆಗೆ ಬಂದಿದ್ದಾರೆ.ಇದೀಗ ಅವರ ಮುಂದೆ ಕುಳಿತು ಕ್ಷಮೆ ಯಾಚಿಸುತ್ತಿದ್ದೇನೆ ಎಂದಿದ್ದು, ಯಾವುದೇ ಕಾರ್ಮಿಕರಿಗೆ ಈ ಘಟನೆಯಿಂದ ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ ಬಿಡಿ. ನನ್ನ ಕಾರು ಸಿಬ್ಬಂದಿಗೆ ಡಿಕ್ಕಿ ಹೊಡೆದಿದ್ದು ನನ್ನ ಗಮನಕ್ಕೆ ಬಂದಿಲ್ಲ. ನನ್ನ ಇದು ಆಕಸ್ಮಿಕವಾಗಿ ನಡೆದ ಘಟನೆ ಆಗ ನನಗೆ ಗೊತ್ತಾಗಲಿಲ್ಲ ಎಂದಿದ್ದಾರೆ. ಸಿಬ್ಬಂದಿ ಬಳಿ ಕ್ಷಮೆ ಕೇಳಿದ ವಿಡಿಯೋವನ್ನು ತನ್ನ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು