ದ್ವಾರಕೀಶ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಸಿಎಂ, ಡಿಸಿಎಂ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರರಂಗದಲದಲ್ಲಿ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ.

ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ನುಡಿದರು.

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ಹಿರಿಯ ಕಲಾವಿದ ದ್ವಾರಕೀಶ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಕಲಾವಿದನಾಗಿ ಅಗಾಧವಾದ ಸೇವೆ ಸಲ್ಲಿಸಿರುವ ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ.

ಕನ್ನಡ ಚಿತ್ರರಂಗದಲ್ಲಿ ಅನೇಕ ಹೊಸ ಮೈಲುಗಲ್ಲುಗಳನ್ನು ಸಾಧಿಸಿ, ಚಿತ್ರರಂಗಕ್ಕೆ ದೊಡ್ಡ ಅಡಿಪಾಯ ಹಾಕಿಕೊಟ್ಟವರಲ್ಲಿ ದ್ವಾರಕೀಶ್ ಕೂಡ ಒಬ್ಬರು. ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್, ಡಾ.ಅಂಬರೀಶ್, ಶಂಕರ್ ನಾಗ್ ಸೇರಿದಂತೆ ಕನ್ನಡ ಚಿತ್ರರಂಗದ ಘಟಾನುಘಟಿ ನಟರ ಜೊತೆ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಬೆಳೆಸಿದ್ದಾರೆ.

ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್  ಸಂದೇಶದಲ್ಲಿ ತಿಳಿಸಿದ್ದಾರೆ.

Chaitra Kulal

Recent Posts

‘ಬಿರಿಯಾನಿ ಹಟ್’ ಹೊಟೇಲ್ ನಲ್ಲಿ ಬೆಂಕಿ ಅವಘಡ : ಲಕ್ಷಾಂತರ ರೂ.ನಷ್ಟ

ಉಡುಪಿಯ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೊಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು…

6 mins ago

ಉಡುಪಿ : ಮೇ 17ರಿಂದ ಪ್ರಾಚೀನ ಕಲ್ಲಚ್ಚು ಕಲಾಕೃತಿಗಳ ಪ್ರದರ್ಶನ

1890-1947ರ ಅವಧಿಯ ಭಿತ್ತಿಪತ್ರ, ಬಟ್ಟೆ ಲೇಬಲ್, ಬೆಂಕಿ ಪೊಟ್ಟಣದ ಮೇಲಿನ ಲೇಬಲ್‌ಗಳ ಕಲ್ಲಚ್ಚು ಕಲಾ ಪ್ರದರ್ಶನವನ್ನು ಕುಂಜಿಬೆಟ್ಟುವಿನ ಅದಿತಿ ಕಲಾ…

17 mins ago

ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್…

28 mins ago

90ರ ದಶಕದ ಫೋನನ್ನು ಮರು ಪರಿಚಯಿಸಿದ ನೋಕಿಯಾ

ನೋಕಿಯಾ ತನ್ನ 3210 ಫೋನನ್ನು ಮತ್ತೆ ಮರು ಪರಿಚಯಿಸಿದೆ. 90ರ ದಶಕದಲ್ಲಿ ಐಕಾನಿಕ್​ ಫೋನ್​ ಆಗಿ ಮಾರುಕಟ್ಟೆಗೆ ಬಂದ ನೋಕಿಯಾ…

34 mins ago

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

1 hour ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1 hour ago