ಬೆಂಗಳೂರು: ನಟ ರವಿಚಂದ್ರನ್ ಶೀಘ್ರದಲ್ಲೇ ಲೀಗಲ್ ಥ್ರಿಲ್ಲರ್ ಶೈಲಿಯ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ‘ಆಕ್ಸಿಡೆಂಟ್’, ‘ಲಾಸ್ಟ್ ಬಸ್’, ‘ಅಮೃತ್ ಅಪಾರ್ಟ್ಮೆಂಟ್’ ಮುಂತಾದ ಚಿತ್ರಗಳನ್ನು ನಿರ್ಮಿಸಿದ ಗುರುರಾಜ್ ಕುಲಕರ್ಣಿ (ನಾಡಗೌಡ) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
‘ಜಿ 9 ಕಮ್ಯುನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್’ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ.
ಇನ್ನೂ ಹೆಸರಿಡದ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಗುರುರಾಜ್ ಕುಲಕರ್ಣಿ ಅವರೇ ಕಥೆ ಬರೆದು, ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಎಸ್.ರಮೇಶ್ ಸಂಭಾಷಣೆ ಬರೆದಿದ್ದಾರೆ.
ಅನೂಪ್ ಸೀಳಿನ್ ಸಂಗೀತ, ಶಿವ ಬಿ.ಕೆ.ಕುಮಾರ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು ಸಂಕಲನ ಈ ಚಿತ್ರಕ್ಕಿದೆ.