‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ. ಅಮೇರಿಕದ ವಾಷಿಂಗ್ಟನ್ನ ಸಿಯಾಟಲ್ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್ನಲ್ಲಿ ರಿಷಬ್ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ನೀಡಲಾಗಿದೆ.
ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಅವರು ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನಗೆದ್ದಿದ್ದಾರೆ. ನಮ್ಮ ಉಜ್ವಲಕ್ಕೆ ಕನ್ನಡಿಗರೇ ಕಾರಣ. ನೀವು ಕತ್ತಲ್ಲಲಿ ಕೂತು ನಮ್ಮನ್ನ ನೋಡುತ್ತೀರಿ ಎಂದಿದ್ದಾರೆ.
ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.