News Karnataka Kannada
Tuesday, April 30 2024
ಸಾಂಡಲ್ ವುಡ್

‘ಸೌಜನ್ಯ’ಗೆ ನ್ಯಾಯ ಸಿಗದೆ ಮಂಜುನಾಥನ ದರ್ಶನ ಮಾಡಲ್ಲ ಎಂದ ದುನಿಯಾ ವಿಜಯ್

duniyavijay facebook post
Photo Credit : News Kannada

ಬೆಂಗಳೂರು: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ ರಾಜ್ಯ ಮಾತ್ರವಲ್ಲ ದೇಶಲ್ಲಿಯೇ ಸುದ್ದಿಯಾಗಿದೆ. ಅಷ್ಟರಮಟ್ಟಿಗೆ ಸಿಕ್ಕಾಪಟ್ಟೆ ಚರ್ಚೆ ಹುಟ್ಟುಹಾಕಿದ ಪ್ರಕರಣ ಇದಾಗಿದ್ದು ಇದರ ಬಗ್ಗೆ ಸಾಕಷ್ಟು ಟೀಕೆ ಕೂಡಾ ಕೇಳಿ ಬಂದಿದೆ. ಇದೀಗ ಸ್ಯಾಂಡಲ್​ವುಡ್ ನಟ, ದುನಿಯಾ ವಿಜಯ್ ಕೂಡಾ ಔಜನ್ಯ ಕೇಸ್​ ಬಗ್ಗೆ ಪ್ರತಿಕ್ರಿಯಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್​ಬುಕ್​ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. “ಪ್ರತಿವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು. ಆದರೆ ಸೌಜನ್ಯ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ. ಹೆಚ್ಚು ಸಮಯ ಮರೆಮಾಚಲಾಗದು-ಬುದ್ಧ” ಎಂದು ನಟ ಫೇಸ್​ಬುಕ್​ನಲ್ಲಿ ಬರೆದಿದ್ದಾರೆ.

ನಟನ ಈ ಪೋಸ್ಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ.

ರಾಜ್ಯದ ಹಲವು ಭಾಗಗಳಲ್ಲಿ ಹಳ್ಳಿಗಳಲ್ಲಿಯೂ ಜನರು ಸೌಜನ್ಯ ಪರ ಧ್ವನಿ ಎತ್ತುತ್ತಿದ್ದಾರೆ. ಇದಲ್ಲದೆ ಬಹಳಷ್ಟು ಜನರು ಸೋಷಿಯಲ್ ಮೀಡಿಯಾದಲ್ಲಿ ಜಸ್ಟೀಸ್ ಫಾರ್ ಸೌಜನ್ಯ ಎಂದ ಹ್ಯಾಶ್​ಹ್ಯಾಗ್​ಗಳನ್ನು ಟ್ರೆಂಡ್ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು