ರೈತರ ನಿಜಜೀವನದ “ಶ್ರೀಮಂತ” ಚಿತ್ರ ತೆರೆಗೆ

ರೈತರ ನಿಜಜೀವನದ ಕಥಾ ಹಂದರ ಹೊಂದಿರುವ “ಶ್ರೀಮಂತ” ಚಲನಚಿತ್ರವೂ ಮೇ.19ರಂದು ರಾಜ್ಯದ 200ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರದ ಸಹಾಯಕ ನಿರ್ದೇಶಕ ಶಿವರಾಜ ದಳವಾಯಿ ತಿಳಿಸಿದ್ದಾರೆ

ಚಿತ್ರದ ಬಗ್ಗೆ ಮಾಹಿತಿ ನೀಡಿದ ಅವರು, ರೈತನ ಬದುಕನ್ನು ಇಟ್ಟುಕೊಂಡು ಶ್ರೀಮಂತ ಚಿತ್ರ ನಿರ್ಮಾಣ ಮಾಡಲಾಗಿದೆ. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಬಹುಭಾಷ ಸೋನ್ ಸೂದ್ ಅವರು ನಟ ಕನ್ನಡದಲ್ಲಿ ಪ್ರಥಮ ಬಾರಿಗೆ ನಾಯಕ ನಟನಾಗಿ ಅಭಿನಯಿಸಿದ್ದಾರೆ. ನಾಯಕ ನಟಿಯಾಗಿ ಮುಂಬೈ ಬೆಡಗಿ ವೈಷ್ಣವಿ ಪಟವರ್ಧನ್ ನಟಿಸಿದ್ದಾರೆ.

ನವನಟ ಕ್ರಾಂತಿ, ಹಿರಿಯ ನಟರಾದ ರಮೇಶ್ ಭಟ್, ರವಿಶಂಕರ್‌ಗೌಡ, ಸಾಧುಕೋಕಿಲ. ಚರಣ್‌ರಾಜ್, ಕಲ್ಯಾಣಿ, ಗಿರಿ, ರಾಜು ತಾಳಿಕೋಟೆ ಸೇರಿದಂತೆ ಹಿರಿಯರ ಕಲಾ ತಂಡವೇ ಅಭಿನಯಿಸಿದೆ. ಪ್ರಸಿದ್ದ ಗಾಯಕ ಎಸ್.ಪಿ.ಬಾಲಸುಬ್ರಮಣ್ಯ ಅವರು ಕನ್ನಡದಲ್ಲಿ ಕೊನೆಯ ಹಾಡನ್ನು ನಮ್ಮ ಚಿತ್ರಕ್ಕೆ ಹಾಡಿದ್ದಾರೆ. ನಾದ ಬ್ರಹ್ಮ ಡಾ.ಹಂಸಲೇಖ ಅವರು ಸಾಹಿತ್ಯ ಮತ್ತು ಸಂಗೀತ ನೀಡಿದ್ದಾರೆ. ಚಿತ್ರವನ್ನು ಹಾಸನ ರಮೇಶ್ ಅವರು ನಿರ್ಮಾಣ ಮತ್ತು ನಿರ್ದೇಶನ ಮಾಡಿದ್ದಾರೆ ಎಂದು ಹೇಳಿದರು.

ರಾಮನಗರ, ಹಾಸನ, ಮಂಡ್ಯ ಸೇರಿದಂತೆ ಉತ್ತರ ಕರ್ನಾಟಕ ಕೆಲವು ಭಾಗದಲ್ಲಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ರೈತರ ಕಥಾ ವಸ್ತು ಹೊಂದಿರುವುದರಿಂದ 100ರಕ್ಕೂ ಹೆಚ್ಚು ರೈತರು ಅಭಿನಯಿಸಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಹಳೆಯ ಕನ್ನಡ ಭಾಷಾ ಪ್ರಯೋಗವನ್ನು ಚಿತ್ರದಲ್ಲಿ ಮಾಡಲಾಗಿದೆ, 150ಕ್ಕೂ ಹೆಚ್ಚು ಗಾದೆ ಮಾತುಗಳನ್ನು ಬಳಕೆ ಮಾಡಿಕೊಂಡಿದ್ದೇವೆ ಎಂದು ಕನ್ನಡದ ಸೊಗಡಿನ ಬಳಕೆ ಬಗ್ಗೆ ವಿವರಿಸಿದ್ದಾರೆ.

ಈ ವೇಳೆ ಚಿತ್ರತಂಡ ಸದಸ್ಯರಾಗಿರುವ ಗುರು ಸಿದ್ದೇಗೌಡ, ಸುರೇಶ್ ಅವರ ಜತೆಗಿದ್ದರು.

Gayathri SG

Recent Posts

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

4 seconds ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

22 mins ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

43 mins ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

1 hour ago

ಕಿರುತೆರೆ ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

ಹಿಂದಿ ಕಿರುತೆರೆ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಪ್ರಧಾನಿಯವರ ಕೆಲಸದಿಂದ ಪ್ರಭಾವಿತಳಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು…

2 hours ago

ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ : 16 ವರ್ಷದ ಪೋರನಿಂದ ಇ-ಮೇಲ್‌ ರವಾನೆ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದ  ಸುಮಾರು 100 ಶಾಲೆಗಳಿಗೆ ಇ-ಮೇಲ್‌ ಮೂಲಕ ಒಡ್ಡಲಾದ ಬಾಂಬ್ ಬೆದರಿಕೆ…

2 hours ago