ಕಳೆದೊಂದು ದಿನದಿಂದ ಸಾಮಾಜಿಕ ಜಾಲತಾಣದಲ್ಲಿ ಭಾರತ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಕಾಂತಾರ ಚಾಪ್ಟರ್ 1 ಸಿನಿಮಾದ ಫಸ್ಟ್ ಲುಕ್ ಟೀಸರ್ ಸಖತ್ ವೈರಲ್ ಆಗಿದ್ದು, ಟ್ರೆಂಡಿಂಗ್ ಸೃಷ್ಟಿಸಿದೆ.
ಯುಟ್ಯೂಟ್ನಲ್ಲೂ ಈ ಸಿನಿಮಾದ ಟೀಸರ್ ಹವಾ ಜೋರಾಗಿದ್ದು, ಕೇವಲ 24 ಗಂಟೆಗಲಲ್ಲಿ 13 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡಿದೆ. ಇನ್ನು ಗೂಗಲ್ನಲ್ಲಿ ಕಾಂತಾರ 1 ಸಿನಿಮಾ ಬಿಡುಗಡೆ ದಿನಾಂಕವನ್ನು 77 ಲಕ್ಷಕ್ಕೂ ಅಧಿಕ ಜನರು ಹುಡುಕಾಡಿದ್ದಾರೆ. ಇನ್ನು ಕಾಂತಾರ 1 ಸಿನಿಮಾದ ಟೀಸರ್ ವೀಕ್ಷಣೆ ಮಾಡಿದ ಗೂಗಲ್ ‘2024 got more exciting. saw the ಕಾಂತಾರ teaser, and just want to say wooooooaaaah’ (2024 ಹೆಚ್ಚು ರೋಮಾಂಚನಕಾರಿಯಾಗಿದೆ. ಕಾಂತಾರ ಟೀಸರ್ ನೋಡಿದೆ, ಮತ್ತು ಕೇವಲ ವಾ….ವ್ ಎಂದು ಹೇಳಲು ಬಯಸುತ್ತೇನೆ) ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದೆ.
ಕಾಂತಾರ ಚಾಪ್ಟರ್ 1 ಫಸ್ಟ್ ಲುಕ್ ರಿವೀಲ್ ಆಗಿರುವ ವಿಡಿಯೋದ ಆರಂಭದಲ್ಲಿ ರಿಷಬ್ ಶೆಟ್ಟಿ ಬೆಳಕು ಹಿಡಿದು ಕಾಡಿನೊಳಗೆ ಓಡಿ ಹೋಗುತ್ತಾರೆ. ಬಳಿಕ ದಟ್ಟ ಗುಹೆಯಲ್ಲಿ ರುದ್ರಾಕ್ಷಿ ಮಾಲೆ ಧರಿಸಿ ಉಗ್ರ ಅವತಾರದಲ್ಲಿ ನಿಂತಿರುವ ರಿಷಬ್ನ ಈ ಫಸ್ಟ್ ಲುಕ್ನಲ್ಲಿ ನೋಡಬಹುದು. ಮೈ ತುಂಬಾ ರಕ್ತದ ಕಲೆಯನ್ನು ನೋಡಬಹುದು. ಮತ್ತೊಂದು ಅಶ್ಚರ್ಯ ಏನೆಂದರೆ ರಿಷಬ್ ಮುಖ ರಿವೀಲ್ ಆಗುವ ಸಮಯದಲ್ಲಿ ಅವರ ಹಿಂದೆ ಶಿವನ ತ್ರಿಶೂಲ ಕಾಣಿಸುತ್ತದೆ.
ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಕೆರಾಡಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮುಹೂರ್ತ ಅದ್ಧೂರಿಯಾಗಿ ನಡೆದಿದೆ.
Read More: https:
1. https://kannada.newskarnataka.com/entertainment/rishab-shetty-kantara-02-poster-release/27112023
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…