ಹುಬ್ಬಳ್ಳಿ: ಏ.7ರಂದು ರಾಜ್ಯಾದ್ಯಂತ ವೀರಂ ಚಲನಚಿತ್ರ ಬಿಡುಗಡೆ

ಹುಬ್ಬಳ್ಳಿ: ಶಶಿಧರ್ ಸ್ಟುಡಿಯೋಸ್ ಪ್ರೋಡಕ್ಷನ್ ನಿರ್ಮಾಣದ ಶ್ರೀನಗರ ಕಿಟ್ಟಿ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ವೀರಂ ಚಲನಚಿತ್ರ ಏಪ್ರಿಲ್ 07 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ನಿರ್ದೇಶಕ ಖದರ್ ಕುಮಾರ್ ಹಾಗೂ ನಟ ಪ್ರಜ್ವಲ್ ದೇವರಾಜ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ಚಿತ್ರದಲ್ಲಿ ನಟಿ ರಚಿತಾ ರಾಮ್, ನಟರಾದ ಅಚ್ಯುತ್ ಕುಮಾರ್, ಶಿಷ್ಯದೀಪಕ್, ಚಿರಾಗ್ ಜಾನಿ, ಬಲರಾಜವಾಡಿ, ಮೈಕೋ ನಾಗರಾಜ್ ಸೇರಿದಂತೆ ಪ್ರಮುಖರು ಅಭಿನಯಿಸಿದ್ದಾರೆ ಎಂದರು.

ಮೊದಲಿನಿಂದಲೂ ಉತ್ತರ ಕರ್ನಾಟಕ ಜನತೆ ನಂಗೆ ತುಂಬಾ ಇಷ್ಟಾ ಬಹುತೇಕ ನನ್ನೆಲ್ಲಾ ಚಿತ್ರಗಳಿಗೆ ಇಲ್ಲಿನ ಜನರ ಆಶೀರ್ವಾದ ಇದೆ ಈ ವೀರಂ ಚಿತ್ರಕ್ಕೂ ಕೂಡಾ ಉತ್ತರ ಕರ್ನಾಟಕ ಜನತೆಯು ಆಶೀರ್ವಾದ ನೀಡಬೇಕು. ಎಲ್ಲರೂ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ನೋಡಿ ಎಂದರು. ವೀರಂ ಚಿತ್ರ ರಾಜ್ಯಾದ್ಯಂತ ಸುಮಾರು 300 ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದ್ದು, 8 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಚಿತ್ರ ಇದಾಗಿದೆ ಎಂದರು. ಇನ್ನೂ ಚಿತ್ರದಲ್ಲಿ 4 ಹಾಡು ಹಾಗೂ 5 ಪೈಟ್ ಗಳು ಇವೆ ಎಂದು ಮಾಹಿತಿ ನೀಡಿದರು.

Gayathri SG

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

13 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

14 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

33 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

37 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

42 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

48 mins ago