ಹುಬ್ಬಳ್ಳಿ: ನಗರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಆಗಮಿಸಿದ್ದು, ಸಿಎಂ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗೆ ಹಾಗೂ ಪ್ರಚಾರಾರ್ಥವಾಗಿ ಆಗಮಿಸಿದ ಸುದೀಪ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಹುಬ್ಬಳ್ಳಿ ಏರ್ಪೋಟ್ ಗೆ ಆಗಮಿಸಿದ ನಟ ಸುದೀಪ್ ಗೆ ಶಾಲು ಹಾಕಿ ಸನ್ಮಾನ ಮಾಡಿದ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಹುಬ್ಬಳ್ಳಿ ಏರ್ಪೋಟ್ ನಿಂದ ಸಿಎಂ ನಾಮಪತ್ರ ಸಲ್ಲಿಕೆಗೆ ಸುದೀಪ್ ಪ್ರಯಾಣ ಬೆಳೆಸಿದ್ದಾರೆ. ಇನ್ನೂ ಹಾವೇರಿ ಜಿಲ್ಲೆಯ ಶಿಗ್ಗಾವಿಗೆ ಪ್ರಯಾಣ ಬೆಳೆಸಿರುವ ಸುದೀಪ್, ಸಿಎಂ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಲಿದ್ದಾರೆ.