ಸಾಂಡಲ್ ವುಡ್

ದರ್ಶನ್ ಬಗ್ಗೆ ಮತ್ತೊಮ್ಮೆ ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್​ವುಡ್​ನ ಇಬ್ಬರು ಸ್ಟಾರ್ ನಟರಾದ ಕಿಚ್ಚ ಸುದೀಪ್ ಹಾಗೂ ದರ್ಶನ್ ನಡುವೆ ವೈಮನಸ್ಸು ಶುರುವಾದಾಗಿನಿಂಲೂ ಅವರು ಒಂದಾಗುವ ಬಗ್ಗೆ ಒಂದಲ್ಲ ಒಂದು ಸುದ್ದಿ ಹರಿದಾಡುತ್ತಲೇ ಇರುತ್ತದೆ. ಅಷ್ಟಕ್ಕೂ ಇವರು ಯಾವಾಗ ತಮ್ಮ ಸಮಸ್ಯೆಗಳನ್ನು ಸಾಲ್ವ್ ಮಾಡುತ್ತಾರೆ? ಈ ಒಂದು ಪ್ರಶ್ನೆ ನಟ ಕಿಚ್ಚ ಸುದೀಪ್ ಅವರಿಗೆ #askkichcha ಸೆಷನ್​ನಲ್ಲಿ ಎದುರಾಗಿದೆ. ನಟ ಈ ಒಂದು ಪ್ರಶ್ನೆಗೆ ಉತ್ತರ ಕೂಡಾ ಕೊಟ್ಟಿದ್ದಾರೆ.

ಸಮಸ್ಯೆ ಏನು ಅಂತ ಇಬ್ಬರೂ ಹುಡುಕುತ್ತಾ ಇದ್ದೀವಿ ಎಂದು ನಗುವ ಎಮೋಜಿಯನ್ನು ಹಾಕಿದ್ದಾರೆ ಕಿಚ್ಚ ಸುದೀಪ್. ಸರ್ ನಿಮ್ಮ ಮತ್ತೆ ದರ್ಶನ್ ಅವರದ್ದು ಸಮಸ್ಯೆಯನ್ನು ಯಾವಾಗ ಸಾಲ್ವ್ ಮಾಡಿಕೊಳ್ಳುತ್ತೀರಾ? ಇನ್ನು ಎಷ್ಟು ಟೈಮ್ ಗೊಳ್ತೀರಾ ಎಂದು ಕರುನಾಡಿನದ ಕುವರ ವಿಷ್ಣು ಎನ್ನುವ ಟ್ವೀಟರ್ ಅಕೌಂಟ್​ನಿಂದ ಟ್ವೀಟ್ ಮಾಡಲಾಗಿದೆ.

ಅಂತೂ ಕಿಚ್ಚ ಅವರು ಈ ಒಂದು ಪ್ರಶ್ನೆಗೂ ಉತ್ತರ ಕೊಟ್ಟಿದ್ದಾರೆ. ತಮ್ಮಿಬ್ಬರ ನಡುವಿನ ಸಮಸ್ಯೆ ಏನೆಂಬುದನ್ನು ಇಬ್ಬರು ಹುಡುಕುತ್ತಿರುವುದಾಗಿ ಹೇಳಿದ್ದಾರೆ.

ಸುದೀಪ್ ಎನ್ನುವ ನೆಟ್ಟಿಗರೊಬ್ಬರು ಕಿಚ್ಚ ಹಾಗೂ ದರ್ಶನ್ ಅವರ ಫೋಟೋ ಪೋಸ್ಟ್ ಮಾಡಿ ದಾಸ ದರ್ಶನ್ ಬಗ್ಗೆ ಒಂದು ಮಾತು ಹೇಳಿ ಎಂದು ಕೇಳಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್ ಅವರು ಎಮೋಜಿ ಮೂಲಕವೇ ಅಪ್ಪುಗೆ ಕೊಟ್ಟಿದ್ದಾರೆ. ಹಗ್ ಮಾಡುವ ಎಮೋಜಿಯನ್ನು ಹಾಕಿ ಎಂದಿಗೂ ಅವರಿಗೆ ಒಳ್ಳೆಯದನ್ನೇ ಬಯಸುತ್ತೇನೆ ಎಂದಿದ್ದಾರೆ.

Ashitha S

Recent Posts

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

7 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

10 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

22 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

24 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

28 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

38 mins ago