ಮೈಸೂರು: ಯುವ ಪ್ರತಿಭೆಗಳನ್ನಿಟ್ಟುಕೊಂಡು ತಯಾರು ಮಾಡಿದ ದರ್ಬಾರ್ ಚಿತ್ರದ ಚಿತ್ರೀಕರಣ ಮುಗಿದು ತೆರೆಗೆ ಬರಲು ಸಿದ್ಧವಾಗಿದೆ. ಇದೀಗ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಜೂನ್ 9ರಂದು ದರ್ಬಾರ್ ಸಿನಿಮಾ ತೆರೆಕಾಣಲಿದೆ.
ಈ ಕುರಿತಂತೆ ಸಂಗೀತ ನಿರ್ದೇಶಕ ವಿ.ಮನೋಹರ್ ಮಾತನಾಡಿ, ಸುಮಾರು 23 ವರ್ಷಗಳ ನಂತರ ನಾನು ಮತ್ತೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದೇನೆ.ಅದಕ್ಕೆ ಕಾರಣ ಈ ಸಿನಿಮಾದ ನಟ ಸತೀಶ್. “ಇಂದ್ರ ಧನುಷ್’ ಸಿನಿಮಾದ ನಂತರ ನಾನೂ ಸೀರಿಯಲ್, ಸಂಗೀತ ನಿರ್ದೇಶನ ಅಂತ ಬ್ಯುಸಿಯಾಗುತ್ತಾ ಹೋದೆ. ಹಾಗಾಗಿ ಅಂದುಕೊಂಡಂತೆ ಸಿನಿಮಾ ನಿರ್ದೇ ಶನ ಮಾಡಲು ಸಾಧ್ಯವಾಗಲಿಲ್ಲ. ಇನ್ನು ಸಿನಿಮಾರಂಗಕ್ಕೆ ಬರೋಕೂ ಮುನ್ನ ನಾನು ಕೆಲ ದಿನಪತ್ರಿಕೆಗಳಿಗೆ ಕಾರ್ಟೂನ್ ಬರೆಯುತ್ತಿದ್ದೆ. ಆಗಿಂದಲೇ ನಾನು ರಾಜಕೀಯದ ಬಗ್ಗೆ ತಿಳಿದುಕೊಂಡಿದ್ದೆ. ಇದೇ ಕಂಟೆಂಟ್ ಇಟ್ಟುಕೊಂಡು ಸಿನಿಮಾ ಮಾಡಬೇಕು ಎಂದುಕೊಡಿದ್ದೆ. ಈಗ ಅದಕ್ಕೆ ಅವಕಾಶ ಸಿಕ್ಕಿದ್ದು, ರಾಜಕೀಯ ವಿಡಂಭನೆಯ ಕಥೆಯನ್ನು “ದರ್ಬಾರ್’ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎಂದು ಕಥಾಹಂದರದ ವಿವರಣೆ ನೀಡಿದರು.
ದರ್ಬಾರ್’ ಸಿನಿಮಾ ಶುರುವಾದ ನಂತರ ಕೋವಿಡ್ ಹೆಚ್ಚಾಯಿತು. ಆ ಭಯದಲ್ಲಿಯೇ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಮಾಡಿದೆವು. ಮದ್ದೂರು ಬಳಿಯ ಹಳ್ಳಿಯೊಂದರಲ್ಲಿ ಸಿನಿಮಾದ ಬಹುತೇಕ ಶೂಟಿಂಗ್ ನಡೆಸಲಾಗಿದೆ. ಈ ಹಿಂದೆ “ದಿಲ್ದಾರ್’ ಸಮಯದಿಂದಲೂ ಸ್ನೇಹಿತರಾಗಿದ್ದ ಸತೀಶ್ ಈ ಕಥೆ ಹೇಳಿದರು. ಅದರಲ್ಲೂ ಪಾಲಿಟಿಟ್ಸ್ ಇತ್ತು. ಇವತ್ತಿನ ರಾಜಕೀಯವನ್ನು ವ್ಯಂಗ್ಯವಾಗಿ ಹೇಳುವ ಸಬ್ಜೆಕ್ಟ್ ಎಂದರು.
ಈ ಚಿತ್ರ ದಲ್ಲಿ ಹಲವಾರು ಕಲಾ ಬಳಗ ಹಾಗೂ ರಂಗ ಕಲಾವಿದರ ತಂಡ ವನ್ನು ಹೊಂದಿದ್ದು, ಸಂತೋಷ್ ಕಾಮಿಡಿ ಕಿಲಾಡಿ ಅವರು ಈ ಚಿತ್ರದಲ್ಲಿ ಭಾಗಿಯಾಗಿದ್ದು ನಿರ್ದೇಶಕರು ಆದ ಸತೀಶ್ ಅವರ ಪರಿಚಯವಾಗಿತ್ತು ಮಾತನಾಡುತ್ತ ಒಂದು ಒಳ್ಳೆಯ ಕಥೆಯನ್ನು ತಿಳಿಸಿದ್ದರು ನಾನು ಪತ್ರಕರ್ತನಾಗಿ ಕಾರ್ಟೋನಿಸ್ಟ್ ಆಗಿ ಕೆಲಸ ಮಾಡಿರುವೆ ನನಗೆ ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಮನೋಭಾವನೆ ಇತ್ತು ಆದರೆ ಆಗಿರಲಿಲ್ಲ. ಈ ಸಿನಿಮಾದಲ್ಲಿ 7 ಚರಣಗಳ ಹಾಡನ್ನು ಒಂದಿದೆ ನಾನು ಸಹಾ ಸಾಹಿತ್ಯ ಹಾಗೂ ನಿರ್ಮಾಪಕರಾಗಿ ಸೇವೆ ಮಾಡಲು ಅವಕಾಶವನ್ನು ಸಿಕ್ಕಿದ್ದೇ ಎಂದು ಹೇಳಿದರು.
ರಂಗಿತರಂಗ, ಒಂದು ಮೊಟ್ಟೆಯ ಕಥೆ,ಯು- ಟರ್ನ್, ಕೆಜಿಎಫ್, ಕಾಂತಾರದಂತಹ ಕೆಲವು ಚಿತ್ರಗಳು ಜನರ ಮನಸ್ಸನ್ನು ಗೆದ್ದವು. ಹೊಸಬರು ಮಾಡುವ ಹೊಸ ಪ್ರಯೋಗಗಳನ್ನು ಜನರು ಇಷ್ಟಪಟ್ಟಿದ್ದಾರೆ. ಅವುಗಳಲ್ಲಿ ಕಥೆಗೆ ಹೆಚ್ಚಿನ ಪ್ರಾಮುಖ್ಯತೆ ಇದ್ದುದರಿಂದ ಜನರು ಆ ಚಿತ್ರಗಳತ್ತ ಆಕರ್ಷಿತರಾದರು. ಇಂತಹ ಏರಿಳಿತಗಳು ಕನ್ನಡ ಚಿತ್ರರಂಗದಲ್ಲಿ ಉಂಟಾಗುತ್ತಿರುತ್ತವೆ ಎಂದರು.
ಯುವ ನಿರ್ದೇಶಕರು ಹಾಗೂ ನಿರ್ಮಾಪಕರು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಲು ಒಲವು ತೋರಿದರೆ ಚಿತ್ರರಂಗ ಇನ್ನಷ್ಟು ಬೆಳೆಯಲು ಸಾಧ್ಯ ಆಗುತ್ತದೆ. ಹಣ ಮಾಡುವುದಕ್ಕೆ ಚಿತ್ರವನ್ನು ನಿರ್ಮಿಸುವುದಾದರೆ ಅವುಗಳಿಗೆ ಉಳಿಗಾಲ ಇರುವುದಿಲ್ಲ ಎಂದು ಹೇಳಿದರು.
ಜಯಂತ್ ಕಾಯ್ಕಿಣಿ, ಕವಿರಾಜ್, ನಾಗೇಂದ್ರ ಪ್ರಸಾದ್ ಸೇರಿದಂತೆ ಅನೇಕ ಸಾಹಿತಿಗಳಿದ್ದಾರೆ. ಪ್ರಸ್ತುತ ಸಂಗೀತ ನಿರ್ದೇಶಕರು ನೀಡುವ ರೆಡಿಮೇಡ್ ಟ್ಯೂನ್ಗಳಿಗೆ ಸಾಹಿತ್ಯ ಬರೆಯುವಂತಹ ಸನ್ನಿವೇಶ ಸೃಷ್ಟಿ ಆಗಿದೆ. ಅಂತಹ ಸಾಮರ್ಥ್ಯ ಕೂಡ ಜಯಂತ್ ಕಾಯ್ಕಿಣಿ ಅವರಲ್ಲಿದೆ. ಆದರೆ ಕಥೆಗೆ ಹೊಂದಿಕೊಂಡಂತೆ ಮೂಡಿ ಬರುವ ಸಾಹಿತ್ಯ ಹೆಚ್ಚು ಸತ್ವಯುತ ಆಗಿರುತ್ತದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜಗುರು ನಾಗೇಂದ್ರ, ಬೆಂಗಳೂರು, ಶಿವಬಾಲಾಜಿ, ಬಸವರಾಜ ಗೌಡ, ಬಲ ಶಂಕರ, ಮಂಜುನಾಥ್ ಜೈ ಶಂಕರ್, ನಾಯಕ ಸತೀಶ್ ಹಾಜರಿದ್ದರು.
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…
ಪುನೀತ್ ರಾಜಕುಮಾರ್ ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ ಅಂಜನಿಪುತ್ರ’ ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.
ಬಾಲಿವುಡ್ ಕ್ವೀನ್ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ…
ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್…
ಇಬ್ಬರು ಮಕ್ಕಳ ತಂದೆ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಸಂಭವಿಸಿದೆ. ಘಟನೆ ಬೆನ್ನಲ್ಲೇ ಪತ್ನಿಯೂ ಆತ್ಮಹತ್ಯೆ…
ನಾಲೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಗಂಡೆ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಘಟನೆ…