ಬೆಂಗಳೂರು: ರಿಷಬ್ ಶೆಟ್ಟಿ ಅವರು ಕನ್ನಡ ಚಿತ್ರರಂಗದ ಪರವಾಗಿ ಅನೇಕ ಬಾರಿ ಮಾತನಾಡಿದ್ದಿದೆ. ಈಗ ಅವರು ಒಟಿಟಿ ಪ್ಲಾಟ್ಫಾರ್ಮ್ಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಟಿಟಿ ಅವರು ಹೆಚ್ಚು ತೆರೆದುಕೊಂಡಿಲ್ಲ ಎಂದಿದ್ದಾರೆ.
ಇತ್ತೀಚೆಗೆ ಅವರು ಗೋವಾದಲ್ಲಿ ನಡೆದ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಅವರಿಗೆ ಸ್ಪೆಷಲ್ ಜ್ಯೂರಿ ಅವಾರ್ಡ್ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಅವರು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಒಟಿಟಿ ಪ್ಲಾಟ್ಫಾರ್ಮ್ಗಳು ಕನ್ನಡ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೋರಿದ್ದಾರೆ.
ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇಲ್ಲಿ ಸಬ್ಸ್ಕ್ರೈಬ್ಗಳು ಸಿಗುವುದಿಲ್ಲ ಎಂದು ಅವರು ಹೇಳುತ್ತಾರೆ. ಕೊರೊನಾ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಒಡೆತನದ ‘ಪರಂವಃ ಸ್ಟುಡಿಯೋಸ್’ ಹಾಗೂ ನನ್ನ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಸಾಕಷ್ಟು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದವು. ಇದರ ಹೊರತಾಗಿ ಹಲವು ನಿರ್ಮಾಣ ಸಂಸ್ಥೆಗಳು ಸಿನಿಮಾ ಮಾಡುತ್ತಿವೆ. ನಾವು ಚಿತ್ರೋತ್ಸವಗಳನ್ನು ಮಾಡುತ್ತಿದ್ದೇವೆ. ಆದಾಗ್ಯೂ ಅವರು ನಮ್ಮ ಸಿನಿಮಾಗಳು ತೆಗೆದುಕೊಳ್ಳುತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ರಿಷಬ್ ಶೆಟ್ಟಿ.