ಬೆಂಗಳೂರು: ಪಾರ್ವತಮ್ಮ ರಾಜ್ಕುಮಾರ್ ಅವರ ತಮ್ಮ ಶ್ರೀನಿವಾಸ್ ಪುತ್ರನಾದ ನಟ ಧ್ರುವನ್ ಅಲಿಯಾಸ್ ಸೂರಜ್ ಅವರು ಗಂಭೀರ ಅಪಘಾತಕ್ಕೆ ಒಳಗಾಗಿದ್ದಾರೆ. ಅಪಘಾತದಲ್ಲಿ ಯುವ ನಟ ಸೂರಜ್ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಶನಿವಾರ (ಜೂನ್ 24) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ, ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಘವಿಸಿದೆ. ಅಪಘಾತದಲ್ಲಿ ಧ್ರುವನ್ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿದ್ದು ಸೂರಜ್ ಬಲಗಾಲಿನ ಮೇಲೆ ಟಿಪ್ಪರ್ ಹರಿದಿದೆ. ಸದ್ಯ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಧ್ರುವನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧ್ರುವನ್ ನೋಡಲು ಈಗಾಗಲೇ ಶಿವರಾಜ್ ಕುಮಾರ್, ನಿರ್ಮಾಪಕ ಚಿನ್ನೆಗೌಡ ಸೇರಿದಂತೆ ಡಾ. ರಾಜ್ ಕುಟುಂಬದ ಹಲವರು ಮೈಸೂರಿಗೆ ತೆರಳಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.