News Karnataka Kannada
Saturday, May 04 2024
ಸಾಂಡಲ್ ವುಡ್

ಅಪಘಾತದಲ್ಲಿ ಕಾಲು ಕಳೆದುಕೊಂಡ ದೊಡ್ಮನೆ ಕುಟುಂಬದ ನಟ !

Actor sooraj
Photo Credit : News Kannada

ಬೆಂಗಳೂರು: ಪಾರ್ವತಮ್ಮ ರಾಜ್​ಕುಮಾರ್ ಅವರ ತಮ್ಮ ಶ್ರೀನಿವಾಸ್ ಪುತ್ರನಾದ ನಟ ಧ್ರುವನ್ ಅಲಿಯಾಸ್ ಸೂರಜ್​ ಅವರು ಗಂಭೀರ ಅಪಘಾತಕ್ಕೆ ಒಳಗಾಗಿದ್ದಾರೆ. ಅಪಘಾತದಲ್ಲಿ ಯುವ ನಟ ಸೂರಜ್‌ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಶನಿವಾರ (ಜೂನ್​ 24) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂಲಗಳ ಪ್ರಕಾರ,  ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಘವಿಸಿದೆ. ಅಪಘಾತದಲ್ಲಿ ಧ್ರುವನ್ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್​ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿದ್ದು ಸೂರಜ್​ ಬಲ​ಗಾಲಿನ ಮೇಲೆ ಟಿಪ್ಪರ್ ಹರಿದಿದೆ. ಸದ್ಯ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಧ್ರುವನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧ್ರುವನ್ ನೋಡಲು ಈಗಾಗಲೇ ಶಿವರಾಜ್ ಕುಮಾರ್‌, ನಿರ್ಮಾಪಕ ಚಿನ್ನೆಗೌಡ  ಸೇರಿದಂತೆ ಡಾ. ರಾಜ್​ ಕುಟುಂಬದ ಹಲವರು ಮೈಸೂರಿಗೆ ತೆರಳಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು