ಮಂಗಳೂರು: ಜನಪ್ರಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಟ ರಿಷಬ್ ಶೆಟ್ಟಿ ಹುಟ್ಟೂರು ಕೆರಾಡಿ ಹೆಸರಿನಲ್ಲಿ ʼಕೆರಾಡಿ ಸ್ಟುಡಿಯೋಸ್ʼ ಹುಟ್ಟುಹಾಕಿದ್ದು, ಸಿನಿಮಾ ಸಂಬಂಧಿತ ಪ್ರಚಾರ, ಮಾರ್ಕೆಟಿಂಗ್ , ಇವೆಂಟ್ ಲಾಂಚ್ ಮುಂತಾದ ಕೆಲಸಕ್ಕಾಗಿ ʼಕೆರಾಡಿ ಸ್ಟುಡಿಯೋಸ್ʼ ಬಳಕೆಯಾಗಲಿದೆ.
ಈ ಬಗ್ಗೆ ರಿಷಬ್ ಹೀಗೆ ಟ್ವೀಟ್ ಮಾಡಿದ್ದಾರೆ. ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ.. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ, ‘ಕೆರಾಡಿ ಸ್ಟುಡಿಯೋಸ್ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ.
ಅಂದ ಹಾಗೆ ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ, ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ ಎಂದು ರಿಷಬ್ ಹೇಳಿದ್ದಾರೆ.
ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ)…
ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ…
ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಕೊಲೆ ಪ್ರಕರಣ ಹಿನ್ನಲೆ ಈ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ರಾಯಲ್ ಕೆನಡಿಯನ್ ಮೌಂಟೆಡ್…
ತನ್ನ ತಾಯಿಯೊಂದಿಗೆ ನಗರದ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು…
ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ…