ಪವರ್ ಸ್ಟಾರ್ ಕಂಡ ಕನಸಿನ ಪಯಣದ ಚಿತ್ರ ‘ಗಂಧದ ಗುಡಿ’ ಬಿಡುಗಡೆಗೆ ಡೇಟ್ ಫಿಕ್ಸ್

  ಸ್ಯಾಂಡಲ್ ವುಡ್: ದಿವಗಂತ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಎಲ್ಲರು ಕಾತರದಿಂದ ಕಾಯುತ್ತಿದ್ದ ಕನ್ನಡ ಚಿತ್ರರಂಗದ ರಾಜರತ್ನ, ಪವರ್ ಸ್ಟಾರ್ ಕಂಡ ಕನಸಿನ ಪಯಣದ ಚಿತ್ರ ಗಂಧದ ಗುಡಿ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ.

ಟೀಸರ್​ನಿಂದಲೇ ಕನ್ನಡ ಚಿತ್ರರಂಗದಲ್ಲಿ ಸೆನ್ಸೇಷನಲ್ ಕ್ರಿಯೇಟ್ ಮಾಡಿದ ಗಂಧದ ಗುಡಿಯನ್ನು ತೆರೆ ಮೇಲೆ ಚಿತ್ರವನ್ನು ನೋಡಲು ಕಾತುರರಾಗಿರುವ ಕೋಟ್ಯಂತರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಈ ವರ್ಷದ ನಾಡಹಬ್ಬ ರಾಜ್ಯೋತ್ಸವವನ್ನು ಅಪ್ಪುವಿನ ಗಂಧದ ಗುಡಿಯೊಂದಿಗೆ ಆಚರಿಸಲು ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 28, 2022 ರಂದು ಗಂಧದಗುಡಿ ಬಿಡುಗಡೆಯಾಗುತ್ತಿದೆ. ಅಪ್ಪು ಕೊನೆಯದಾಗಿ ದೊಡ್ಡ ಪರದೆಯ ಮೇಲೆ ಕಾಣಿಸಿಕೊಳ್ಳುತ್ತಿರುವ ಚಿತ್ರವಿದು. ರಾಷ್ಟ್ರ ಪ್ರಶಸ್ತಿ ಪಡೆದ ವನ್ಯಜೀವಿ ಚಿತ್ರ ನಿರ್ದೇಶಕ ಅಮೋಘವರ್ಷ ನಿರ್ದೇಶನದ ಚಲನಚಿತ್ರ ಇದಾಗಿದೆ.

ಈ ಸಿನಿಮಾ ಪ್ರಕೃತಿಯತ್ತ ಒಂದು ಪಯಣ. ಒಬ್ಬ ನಿಜವಾದ ನಾಯಕನ ಮತ್ತು ಅವನ ಕಾಳಜಿಯ ಕಥೆ. ಬಯಲು ಸೀಮೆಯಿಂದ ಹಿಡಿದು ಸಮುದ್ರ ತೀರದವರೆಗೂ, ಪತನವಾಗಿರುವ ಕಾಡುಗಳಿಂದ, ಪಶ್ಚಿಮ ಘಟ್ಟ, ದಟ್ಟ ಅರಣ್ಯದವರೆಗೂ ಈ ಮಣ್ಣಿನ ಸಿರಿ ಸೆರೆ ಹಿಡಿದಿರುವ ಸಿನಿಮಾ. ಹಾಡುಗಳೊಂದಿಗೆ, ದೃಶ್ಯ ವೈಭವದೊಂದಿಗೆ ತನ್ನ ಜನರಿಗೆ ಪರಿಚಯಿಸುವ ಉತ್ಸಾಹವನ್ನ ಪುನೀತ್ ರಾಜ್ ಕುಮಾರ್ ಮಾಡಿದ್ದಾರೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

46 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago