ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಮಾತಿನ ಮಲ್ಲ ನಟ ಪ್ರಥಮ್ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಂದು(ನ.24) ಮಂಡ್ಯದ ಹುಡುಗಿ ಭಾನುಶ್ರೀ ಜೊತೆ ಹಸೆಮಣೆ ಏರಿದ್ದಾರೆ.
ಕಳೆದ ದಿನ ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇಂದು ಬೆಳಗ್ಗೆ ಸರಳವಾಗಿ ಮದುವೆ ನೆರವೇರಿದೆ. ನಟ ಪ್ರಥಮ್ ಅವರು ಮೊದಲಿನಿಂದಲೂ ತಾನು ಹಳ್ಳಿ ಹುಡುಗಿಯನ್ನೇ ಮದುವೆಯಾಗುವುದಾಗಿ ಹೇಳಿಕೊಳ್ಳುತ್ತಿದ್ದರು.
ಕಳೆದ ಜೂನ್ ನಲ್ಲಿ ಕುಟುಂಬಸ್ಥರು ಹುಡುಕಿದ್ದ ಮಂಡ್ಯ ಮೂಲದ ಭಾನುಶ್ರೀ ಎಂಬ ಹುಡುಗಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ಪ್ರಥಮ್ ಹಾಗೂ ಭಾನುಶ್ರೀ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ಪ್ರಥಮ್ ಅವರು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ಸ್ಟೈಲ್ನಲ್ಲಿ ಮದುವೆ ಬಗೆಗಿನ ಅಪ್ಡೇಟ್ ಹಂಚಿಕೊಂಡಿದ್ದರು.
ಮುಂದಿನ ವಾರ ಮದುವೆಯಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೆ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೆಸೇಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಚಾರಕ್ಕೆ ಕರೆಯೋದಿಲ್ಲ ಈಗ ಎಲ್ಲಿರ್ತಿರೋ ಅಲ್ಲಿಂದಲೇ ಹಾರೈಸಿ. ಅದ್ಧೂರಿಯಾಗಿ ಆಗಬಹುದಿತ್ತು ಆದರೆ ನನಗೆ ಆಸಕ್ತಿ ಇಲ್ಲ, ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ಬರೆದುಕೊಂಡಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…