ಪಂಚಭೂತಗಳಲ್ಲಿ ‘ಸ್ಪಂದನಾ’ ಲೀನ: ಕುಟುಂಬಸ್ಥರಿಂದ ಅಂತಿಮ ವಿದಾಯ

ಬೆಂಗಳೂರು: ನಟ ವಿಜಯ್‌ ರಾಘವೇಂದ್ರನ ಪತ್ನಿ ಸ್ಪಂದನಾ ಮುತ್ತೈದೆಯಾಗಿ ಇಹಲೋಕ ತ್ಯಜಿಸಿದ್ದಾರೆ. ಆದರೆ, ಈಡಿಗ ಸಮುದಾಯದ ಸಂಪ್ರದಾಯದಂತೆ ಕೊನೆಯದಾಗಿ ಸ್ಪಂದನಾ ಪತಿ ವಿಜಯ್‌ ರಾಘವೇಂದ್ರ ತಾಳಿಯನ್ನು ಕಟ್ಟಿ ಮುತ್ತೈದೆ ಭಾಗ್ಯವನ್ನು ನೀಡಿ ಅಂತ್ಯಕ್ರಿಯೆಯ ವಿಧಿವಿಧಾನ ನೆರವೇರಿಸಿದರು.

ಈ ವೇಳೆ ಸಾವಿರಾರು ಜನರು ಸೇರಿದ್ದರು. ಸ್ನೇಹಿತರ ಜೊತೆಗೆ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿದ್ದ ವೇಳೆ ಸ್ಪಂದನಾ ಅವರಿಗೆ ಹೃದಯಾಘಾತ ಆಗಿತ್ತು. ಶಾಪಿಂಗ್ ಮುಗಿಸಿ ವಿಶ್ರಾಂತಿ ಪಡೆಯುವ ಸಲುವಾಗಿ ಮಲಗಿದ್ದವರು ಮತ್ತೆ ಏಳಲೇ ಇಲ್ಲ. ಬೇರೆ ದೇಶದಲ್ಲಿ ಸಾವಾಗಿದ್ದು ಕಾನೂನು ಪ್ರಕ್ರಿಯೆ ಮುಗಿಸಿದ ಬಳಿಕ ಭಾರತಕ್ಕೆ ಮೃತದೇಹ ತರಬೇಕಿತ್ತು. ಹೀಗಾಗಿ ಇಂದು ಸ್ಪಂದನಾರ ಅಂತ್ಯಕ್ರಿಯೆ ಮಾಡಲಾಗಿದೆ. ನಟ ವಿಜಯ್ ರಾಘವೇಂದ್ರ ಹಾಗೂ ಅವರ ಪುತ್ರ ಶೌರ್ಯ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ.

ಸ್ಪಂದನಾ ಮೃತ ದೇಹಕ್ಕೆ ಮದುವೆಯಲ್ಲಿ ಉಟ್ಟಿದ್ದ ಸೀರೆಯನ್ನು ಉಡಿಸಲಾಗಿತ್ತು. ಸ್ಪಂದನಾ ಮೃತದೇಹಕ್ಕೆ ಸಂಪ್ರದಾಯಬದ್ಧವಾಗಿ ವಿಧಿ ವಿಧಾನಗಳನ್ನು ಮಾಡಿದ ನಂತರದಲ್ಲಿ, ವಿಶೇಷವಾಗಿ ತಯಾರಾದ ವಾಹನದಲ್ಲಿ ಪಾರ್ಥಿವ ಶರೀರವನ್ನು ಹರಿಶ್ಚಂದ್ರ ಘಾಟ್‌ಗೆ ತೆಗೆದುಕೊಂಡು ಹೋಗಲಾಗಿತ್ತು.

ಸ್ಪಂದನಾಗೆ  ಕುಟುಂಬಸ್ಥರು ಅಂತಿಮ ವಿದಾಯ ಹೇಳಿದ್ದಾರೆ.  ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಈಡಿಗ ಸಂಪ್ರದಾಯದಂತೆ ಸ್ಪಂದನಾ ಅಂತ್ಯಕ್ರಿಯೆ ನೆರವೇರಿದೆ.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago