ರಕ್ಷಿತ್ ಶೆಟ್ಟಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಬ್ಯಾಚುಲರ್ ಪಾರ್ಟಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜನವರಿ 26ರಂದು ರಾಜ್ಯಾದ್ಯಂತ ಸಿನಿಮಾ ಮಾಡುವುದಾಗಿ ನಿರ್ಮಾಣ ಸಂಸ್ಥೆ ಘೋಷಣೆ ಮಾಡಿದೆ. ರಕ್ಷಿತ್ ಅಂಡ್ ಟೀಮ್ ಕಿರಿಕ್ ಪಾರ್ಟಿ ನಂತರ ಯೂತ್ ಕಾಮಿಡಿ ಸ್ಟೋರಿ ಹೊಂದಿರುವ ಸಿನಿಮಾವನ್ನು ಕೊಡಲು ಸಜ್ಜಾಗಿದ್ದಾರೆ.
‘ಕಿರಿಕ್ ಪಾರ್ಟಿ’ಯ ಬರಹಗಾರ ಅಭಿಜಿತ್ ಮಹೇಶ್, ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, ‘ಬ್ಯಾಚುಲರ್ ಪಾರ್ಟಿ’ಗೆ ಆಕ್ಷನ್ ಕಟ್ ಹೇಳಿದ್ದಾರೆ.
ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು. ಅದಕ್ಕೂ ಮುನ್ನ ‘ಬ್ಯಾಚುಲರ್ ಪಾರ್ಟಿ’ಯ ಮೊದಲ ಝಲಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ದಿಗಂತ್, ಲೂಸ್ ಮಾದ ಯೋಗಿ ಹಾಗೂ ಅಚ್ಯುತ್ ಕುಮಾರ್ ಪೋಸ್ಟರ್ನಲ್ಲಿದ್ದಾರೆ.
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…
ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು
ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…
ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…
ಪಟ್ಟಣದ ವಿವಿಧ ವಾರ್ಡ್ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…