ಬೆಂಗಳೂರು: ಸನಾತನ ಧರ್ಮದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಪರ ವಿರೋಧ ಚರ್ಚೆಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಹಿರಿಯ ನಟ ಅನಂತನಾಗ್ ಮಾತನಾಡಿದ್ದಾರೆ.
ಸನಾತನ ಧರ್ಮದ ಮಹತ್ವ ಅರಿಯದೇ ಅದರ ಬಗ್ಗೆ ಕೆಟ್ಟದಾಗಿ ಟೀಕೆ ಮಾಡುತ್ತಾರೆ. ಅಜ್ಮಾನದಿಂದ ಮಾತನಾಡುವವರನ್ನು ತಿದ್ದುವ ಕೆಲಸ ನಡೆಯಬೇಕು ಎಂದು ಹೇಳಿದ್ದಾರೆ.
ಭಾರತೀಯ ವಿದ್ಯಾಭವನ ಮತ್ತು ಸುಚಿತ್ರ ಫಿಲಂ ಸೊಸೈಟಿ ಆಯೋಜಿಸಿದ್ದ ಮೂರು ದಿನಗಳ ಅನಂತ್ ನಾಗ್ ಉತ್ಸವದಲ್ಲಿ ಅವರು ಮಾತನಾಡಿದರು, ಸಾವಿರಾರು ವರ್ಷಗಳಿಂದ ಸನಾತನ ಧರ್ಮ ಬೆಳೆದು ಬಂದಿದೆ. ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ. ಈ ಧರ್ಮದ ಬಗ್ಗೆ ನನಗೆ ಭಕ್ತಿ, ಗೌರವ, ಪ್ರೀತಿಯಿದೆ.
ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಈಗ ಎಲ್ಲಿ ನೋಡಿದರೂ ಸನಾತನ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ. ಇದು ಆತಂಕವನ್ನುಂಟು ಮಾಡಿದೆ. ಕೈಲಾಗದವರು ಮೈ ಪರಚಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಸನಾತನ ಧರ್ಮದ ಕುರಿತು ಅರಿವು ಮೂಡಿಸುವ ಕೆಲಸ ನಡೆಯಬೇಕು ಎಂದರು.