News Karnataka Kannada
Thursday, May 02 2024
ಸಾಂಡಲ್ ವುಡ್

ಸ್ಯಾಂಡಲ್ ವುಡ್: ಧೂಳೆಬ್ಬಿಸಿದ ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಟ್ರೇಲರ್!

Kanthara
Photo Credit : News Kannada

ಸ್ಯಾಂಡಲ್ ವುಡ್: ‘ಕಾಂತಾರ’ ಚಿತ್ರ ತುಂಬ ಅದ್ದೂರಿಯಾಗಿ ನಿರ್ಮಾಣ ಆಗಿದೆ ಎಂಬುದಕ್ಕೆ ಟ್ರೇಲರ್​ ಸಾಕ್ಷಿ ಒದಗಿಸುತ್ತಿದೆ. ಅಜನೀಶ್​ ಬಿ. ಲೋಕನಾಥ್​ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ.

ಟ್ರೇಲರ್​ನಲ್ಲಿ ಹಿನ್ನೆಲೆ ಸಂಗೀತ ಸಖತ್​ ಹೈಲೈಟ್​ ಆಗಿದೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣದ ಬಗ್ಗೆ ಜನರು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಕಾಂತಾರ’ ಟ್ರೇಲರ್​ ಗಮನ ಸೆಳೆಯುತ್ತಿದೆ.

ಈ ಸಿನಿಮಾಗೆ ರಿಷಬ್​ ಶೆಟ್ಟಿ ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಪಾತ್ರವನ್ನೂ ನಿಭಾಯಿಸಿದ್ದಾರೆ. ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಕಿಶೋರ್​ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಇಡೀ ಟ್ರೇಲರ್​ನಲ್ಲಿ ಕಿಶೋರ್​ ಮತ್ತು ರಿಷಬ್​ ಶೆಟ್ಟಿ ನಡುವಿನ ಮುಖಾಮುಖಿ ದೃಶ್ಯಗಳು ಆಕರ್ಷಕವಾಗಿ ಮೂಡಿಬಂದಿವೆ. ಪೊಲೀಸ್​ ಅಧಿಕಾರಿಯ ಪಾತ್ರಕ್ಕೆ ಕಿಶೋರ್​ ಬಣ್ಣ ಹಚ್ಚಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಲು ಸಿನಿಪ್ರಿಯರು ಕಾದಿದ್ದಾರೆ.

ಕರಾವಳಿ ಭಾಗದ ಅರಣ್ಯ ಪ್ರದೇಶ, ಅಲ್ಲಿನ ಸಂಸ್ಕೃತಿ, ಜಾನಪದ ಕಲೆಗಳು, ಭೂತಾರಾಧನೆ, ಕಂಬಳ ಸೇರಿದಂತೆ ಅನೇಕ ವಿಚಾರಗಳು ‘ಕಾಂತಾರ’ ಟ್ರೇಲರ್​ನಲ್ಲಿ ಕಾಣಿಸಿವೆ. ಈ ಮೊದಲು ಬಿಡುಗಡೆ ಆಗಿದ್ದ ‘ಸಿಂಗಾರ ಸಿರಿಯೇ..’ ಹಾಡು ಜನರಿಗೆ ಸಖತ್​ ಇಷ್ಟ ಆಗಿದೆ. ಯೂಟ್ಯೂಬ್​ನಲ್ಲಿ ಈ ಗೀತೆಗೆ 30 ಲಕ್ಷಕ್ಕೂ ಅಧಿಕ ವೀವ್ಸ್​ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು