News Karnataka Kannada
Sunday, April 28 2024
ಸಾಂಡಲ್ ವುಡ್

ಬಿಡುಗಡೆಗೆ ತಯಾರಾಗಿದೆ ವಿಶಿಷ್ಟ ಕಥಾ ಹಂದರ ಹೊಂದಿರುವ `ಸಾರಾಂಶ’’

ಕನ್ನಡ ಚಿತ್ರರಂಗವೀಗ ಹೊಸಾ ಹೊಸಾ ಸಿನೆಮಾಗಳಿಗೆ ಅವಕಾಶ ನೀಡುತ್ತಿದ್ದು ಅಂತಹದ್ದೇ  ಮತ್ತೊಂದು ಚಿತ್ರವೀಗ ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ತಯಾರಾಗಿದೆ.
Photo Credit : News Kannada

ಬೆಂಗಳೂರು: ಕನ್ನಡ ಚಿತ್ರರಂಗವೀಗ ಹೊಸಾ ಹೊಸಾ ಸಿನೆಮಾಗಳಿಗೆ ಅವಕಾಶ ನೀಡುತ್ತಿದ್ದು ಅಂತಹದ್ದೇ  ಮತ್ತೊಂದು ಚಿತ್ರವೀಗ ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ತಯಾರಾಗಿದೆ.

`ಸಾರಾಂಶ’  ಎಂಬ ಈ ಚಿತ್ರವನ್ನು ಬಹುಮುಖ ಪ್ರತಿಭೆ ಸೂರ್ಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ,  ಶ್ರುತಿ ಹರಿಹರನ್ ಇಲ್ಲಿ ಪ್ರಧಾನ ಪಾತ್ರವೊಂದನ್ನು ನಿರ್ವಹಿಸಿದ್ದಾರೆ.

ಸೂರ್ಯ ವಸಿಷ್ಠ ಮತ್ತು ಗಂಟುಮೂಟೆ ಖ್ಯಾತಿಯ ರೂಪಾ ರಾವ್ ಸಂಭಾಷಣೆ ಬರೆದಿದ್ದಾರೆ. ಆ ದಿನಗಳು, ತಮಸ್ಸು, ಮಠ ಮುಂತಾದ ಸಿನಿಮಾಗಳ ಮೂಲಕ ಖ್ಯಾತರಾಗಿರೋ ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಓರ್ವ ಕಥೆಗಾರ ತಾನು ಸೃಷ್ಟಿಸಿದ ಪಾತ್ರವನ್ನೇ ಎದುರುಗೊಳ್ಳುವ ರೋಮಾಂಚಕ ಕಥಾ ಎಳೆ, ಆ ಪಾತ್ರವನ್ನು ಕಥೆಗಾರ ಬರೆದನೋ, ಆ ಪಾತ್ರವೇ ಕಥೆಗಾರನ ಮೂಲಕ ಬರೆಸಿಕೊಳ್ಳುತ್ತಿದೆಯೋ ಎಂಬಂಥಾ ಸೂಕ್ಷ್ಮ ಕದಲಿಕೆಯ ಸುತ್ತ ಈ ಸಿನಿಮಾ ಚಲಿಸುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು