ಉಡುಪಿ: ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾದ ಪ್ರಮೋಶನ್ ಗಾಗಿ ಉಡುಪಿಗೆ ಆಗಮಿಸಿರುವ ಸಿಂಪಲ್ ಸ್ಟಾರ್ ಖ್ಯಾತಿಯ ನಟ ರಕ್ಷಿತ್ ಶೆಟ್ಟಿ ಅವರು ಹುಲಿಕುಣಿದು ಗಮನ ಸೆಳೆದರು.
ರಕ್ಷಿತ್ ಮತ್ತು ಚಿತ್ರತಂಡ ಉಡುಪಿಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿತ್ರದ ಪ್ರಚಾರದಲ್ಲಿ ತೊಡಗಿದೆ. ಕೃಷ್ಣನೂರಿನಲ್ಲಿ ಅಷ್ಟಮಿ ಸಂಭ್ರಮ ಜೋರಾಗಿದ್ದು, ಚಿತ್ರದ ನಟಿ ರುಕ್ಷ್ಮಿಣಿ ವಸಂತ್, ನಿರ್ದೇಶಕ ಹೇಮಂತ್ ಜೊತೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ರಕ್ಷಿತ್ ಶೆಟ್ಟಿ ಹುಲಿ ಕುಣಿತಕ್ಕೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಉಡುಪಿಯ ಕಡಿಯಾಳಿಯಲ್ಲಿ ನಡೆದ ಹುಲಿಕುಣಿತ ಸ್ಪರ್ಧೆಯಲ್ಲಿ ಭಾಗವಹಿಸಿ, ಮಾತೃ ಭಾಷೆ ತುಳು ಭಾಷೆಯಲ್ಲಿ ಮಾತನಾಡಿ, ಪ್ರೇಕ್ಷಕರನ್ನು ರಂಜಿಸಿದರು. ಬಳಿಕ ಹುಲಿ ಕುಣಿತಕ್ಕೆ ಹೆಜ್ಜೆ ಹಾಕಿ, ಅಭಿಮಾನಿಗಳಲ್ಲಿ ರೋಮಾಂಚನ ಉಂಟುಮಾಡಿದ್ರು.