ಸ್ಯಾಂಡಲ್ ವುಡ್: “ಹೊಂಬಾಳೆ ಫಿಲಂಸ್’ ಬ್ಯಾನರ್ನಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ ಹಾಗೂ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ’ ಸಿನಿಮಾದ “ಸಿಂಗಾರ ಸಿರಿಯೆ…’ ಎಂಬ ಮೊದಲ ಹಾಡು ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಬಿಡುಗಡೆಯಾಗಿದೆ.
ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ, ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ. ವಿಜಯ್ ಪ್ರಕಾಶ್, ಅನನ್ಯಾ ಭಟ್ ಹಾಗೂ ಪನ್ನಾರ್ ವಲ್ಟಾರ್ ಅವರ ಧ್ವನಿಯಲ್ಲಿ ಹಾಡು ಮೂಡಿ ಬಂದಿದ್ದು, ನಾಯಕನಾಗಿ ರಿಷಭ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ.
“ಸಿಂಗಾರ ಸಿರಿಯೆ…’ ಹಾಡಿನಲ್ಲಿ ಕರುನಾಡ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಚಿತ್ರಿಸಲಾಗಿದೆ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ ಈ ಹಾಡಿನಲ್ಲಿ ಸೊಗಸಾಗಿ ತೋರಿಸಲಾಗಿದೆ.ಈ ಹಾಡಿಗೆ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.