ಫೆಬ್ರವರಿ 8ರಂದು ರಾಜ್ಯಾದಂತ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾಗೆ ಪ್ರೇಕ್ಷಕ ಮಹಾಪ್ರಭುಗಳಿಂದ ಉತ್ತಮ ಪ್ರತಿಕ್ರಿಯೆ ದೊರೆಕಿತ್ತು. ಸದ್ಯ ಸಾಲು ಸಾಲು ಹಬ್ಬಗಳಿರುವುದರಿಂದ ‘ಒಂದು ಸರಳ ಪ್ರೇಮ ಕಥೆ’ ಚಿತ್ರವೂ ಏಪ್ರಿಲ್ 14ರ ಇಂದು ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.
‘ಒಂದು ಸರಳ ಪ್ರೇಮ ಕಥೆ’ ಈ ವರ್ಷದ ಮೊದಲು ಬಿಡುಗಡೆಗೊಂಡ ಚಿತ್ರ. ಆ ಮೂಲಕ ವಿನಯ್ ರಾಜ್ಕುಮಾರ್ ಅವರನ್ನು ಕೆಲ ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಅವರ ನಟನೆ ಕಾಣುವಂತಾಗಿತ್ತು. ನಿರ್ದೇಶಕ ಸಿಂಪಲ್ ಸುನಿ ಅವರು ಒಂದು ರೊಮ್ಯಾಂಟಿಕ್ ಕಾಮಿಡಿ, ಭಾವುಕತೆ, ಮಧುರ ಹಾಡುಗಳು, ಪಂಚಿಂಗ್ ಡೈಲಾಗಗಳಿಂದಲೇ ಪ್ರೇಕ್ಷಕರಿಗೆ ಮನರಂಜನೆ ನೀಡಿದ್ದರು. ಇದೇ ಅಂಶಗಳನ್ನು ಜನರ ಮುಂದಿಟ್ಟು ಗೆದ್ದಿರುವ ‘ಒಂದು ಸರಳ ಪ್ರೇಮ ಕಥೆ’ ಸಿನಿಮಾ ಇದೀಗ ಟಿವಿಯಲ್ಲಿ ಪ್ರಸಾರವಾಗಲು ಸಿದ್ಧವಾಗಿದೆ.
ಈ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ವಿನಯ್ ರಾಜ್ಕುಮಾರ್ ಅವರಿಗೆ ಜೊತೆಯಾಗಿ ಸ್ವಾತಿಷ್ಠ ಕೃಷ್ಣನ್ ಮತ್ತು ಮಲ್ಲಿಕಾ ಸಿಂಗ್ ನಾಯಕಿಯರಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧು ಕೋಕಿಲ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.