ಪವರ್ ಸ್ಟಾರ್ ನಟನೆಯ ಲಕ್ಕಿಮ್ಯಾನ್ ಸಿನಿಮಾದ ಟೀಸರ್ ರಿಲೀಸ್!

ಸ್ಯಾಂಡಲ್ ವುಡ್: ಪವರ್ ಸ್ಟಾರ್ ನಟನೆಯ ಲಕ್ಕಿಮ್ಯಾನ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಅಪ್ಪುನನ್ನು ಮತ್ತೊಮ್ಮೆ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಲಕ್ಕಿ ಮ್ಯಾನ್ ಸಿನಿಮಾ ಇದೀಗ ಬಿಡುಗಡೆಗೆ ಸಜ್ಜಾಗುತ್ತಿದೆ. ಮುಂಚಿತವಾಗಿ ಸಿನಿಮಾತಂಡ ಟೀಸರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಸಿನಿಮಾದಲ್ಲಿ ದೇವರ ಪಾತ್ರದಲ್ಲಿ ನಟಿಸಿದ್ದಾರೆ. ಅಂದಹಾಗೆ ಲಕ್ಕಿ ಮ್ಯಾನ್ ನಟಿ ಡಾರ್ಲಿಂಗ್ ಕೃಷ್ಣ ಮತ್ತು 777 ಚಾರ್ಲಿ ಖ್ಯಾತಿಯ ನಟಿ ಸಂಗೀತ ಶೃಂಗೇರಿ ನಟಿಸಿದ್ದಾರೆ.

ಸದ್ಯ ರಿಲೀಸ್ ಆಗಿರುವ ಟೀಸರ್ ನಲ್ಲಿ ಪುನೀತ್ ರಾಜ್ ಕುಮಾರ್ ‘ನಿನ್ನ ಲೈಫ್‌ನಲ್ಲಿ ಆಗಿರುವ ಮಿಸ್ಟೇಕ್‌ಗಳನ್ನು ಸರಿಮಾಡಿಕೊಳ್ಳಲು ನಿನಗೆ ಸೆಕೆಂಡ್ ಚಾನ್ಸ್ ಕೊಡ್ತೀನಿ’ ಎಂದು ಹೇಳಿರುವ ಡೈಲಾಗ್ ಅಭಿಮಾನಿಗಳ ಹೃದಯ ಗೆದ್ದಿದೆ. ಲಕ್ಕಿ ಮ್ಯಾನ್ ಟೀಸರ್ ರಿಲೀಸ್ ಆಗುತ್ತಿದ್ದಂತೆ ಪುನೀತ್ ರಾಜ್ ಕುಮಾರ್ ಹೆಸರ್ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.

ಈ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಶೇಷ ಹಾಡಿಗೆ ಸಖತ್ ಡಾನ್ಸ್ ಮಾಡಿದ್ದಾರೆ. ಡಾನ್ಸರ್ ಪ್ರಭುದೇವ ಜೊತೆ ಪುನೀತ್ ಹೆಜ್ಜೆ ಹಾಕಿದ್ದಾರೆ. ಇಬ್ಬರ ಮಸ್ತ್ ಡಾನ್ಸ್ ನೋಡಲು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ. ಲಕ್ಕಿ ಮ್ಯಾನ್ ಮೂಲಕ ನಟನೆ ಜೊತೆಗೆ ಅಪ್ಪು ಡಾನ್ಸ್ ಕೂಡ ನೋಡಬಹುದು. ಈ ಸಿನಿಮಾದಲ್ಲಿ ಇನ್ನು ಉಳಿದಂತೆ ಕಾಮಿಡಿ ಸ್ಟಾರ್ ಸಾಧುಕೋಕಿಲಾ, ರೋಶಿಕಾ ಪ್ರಕಾಶ್ ಸೇರಿದಂತೆ ಇನ್ನು ಅನೇಕರು ನಟಿಸಿದ್ದಾರೆ. ಲಕ್ಕಿ ಮ್ಯಾನ್ ಸಿನಿಮಾಗೆ ಎಸ್ ನಾಗೇಂದ್ರ ಪ್ರಸಾದ್ ಆಕ್ಷನ್ ಕಟ್ ಹೇಳಿದ್ದಾರೆ. ಇನ್ನು ಸಿನಿಮಾದ ಟೀಸರ್ ನೋಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಹ ಇಷ್ಟಪಟ್ಟಿದ್ದಾರೆ.

 

Sneha Gowda

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

10 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

15 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

27 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

34 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

37 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

52 mins ago