ಕಿಚ್ಚ ಸುದೀಪ್ ಅವರ 46ನೇ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್ ಮಾಡುವ ರೀತಿಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದೆ. ‘ವಿಕ್ರಾಂತ ರೋಣ’ ಸಿನಿಮಾ ಬಳಿಕ ಸುದೀಪ್ ಅವರು ಒಪ್ಪಿಕೊಂಡ ಚಿತ್ರ ಇದು. ಈ ಸಿನಿಮಾಗೆ ‘ವಿ ಕ್ರಿಯೇಷನ್ಸ್’ ಬ್ಯಾನರ್ ಮೂಲಕ ಕಲೈಪುಲಿ ಎಸ್. ಧಾನು ಅವರು ಬಂಡವಾಳ ಹೂಡುತ್ತಿದ್ದಾರೆ.
ಇತ್ತೀಚೆಗೆ ಈ ಚಿತ್ರ ಸೆಟ್ಟೇರಿತು. ಪ್ರೊಮೋ ಶೂಟಿಂಗ್ನಲ್ಲಿ ಭಾಗಿ ಆಗಿದ್ದರ ಬಗ್ಗೆ ಕಿಚ್ಚ ಸುದೀಪ್ ಅವರು ಅಪ್ಡೇಟ್ ನೀಡಿದ್ದರು. ಈಗ ಟೀಸರ್ ರಿಲೀಸ್ ಆಗಿ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ #Kichcha46 ಹ್ಯಾಶ್ಟ್ಯಾಗ್ ಟ್ರೆಂಡ್ ಆಗಿದೆ. ಸುದೀಪ್ ಅಭಿಮಾನಿಗಳ ವಲಯದಲ್ಲಿ ಈ ಟೀಸರ್ ವೈರಲ್ ಆಗಿದೆ.
ಇದರಲ್ಲಿನ ಡೈಲಾಗ್ಗಳು ಗಮನ ಸೆಳೆಯುತ್ತಿವೆ. ‘ನಾನು ಯುದ್ಧಕ್ಕೆ ಇಳಿದ ಮೇಲೆ ದಯೆ, ಕ್ಷಮೆ, ಸಂಧಾನ ಇದು ಯಾವುದೂ ಇರೋದಿಲ್ಲ. ನಾನು ಮನುಷ್ಯ ಅಲ್ಲ. ನಾನು ರಾಕ್ಷಸ’ ಎಂದು ಟೀಸರ್ನ ಕೊನೆಯಲ್ಲಿ ಸುದೀಪ್ ಹೇಳುವ ಡೈಲಾಗ್ ಟ್ರೆಂಡ್ ಆಗುತ್ತಿದೆ.