ತೆರೆಗೆ ಬರಲಿದೆ ಬಿರಾದರ್ 500ನೇ ಚಿತ್ರ ’90 ಬಿಡಿ ಮನೀಗ್ ನಡಿ’

ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ ’90 ಬಿಡಿ ಮನೀಗ್ ನಡಿ’.ಈ ಗುರುವಾರ(ಜೂನ್ 29) ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ್ ಅರೆಹೊಳೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಈ ಚಿತ್ರದ ಮೂಲಕ ಬಿರಾದಾರ್ ಅವರು 70ನೇ ವಯಸ್ಸಿನಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಇದೇ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ

ಅಮ್ಮ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಬಿರಾದಾರ್, ಅಭಯ್, ಪ್ರೀತು ಪೂಜಾ‌, ನೀತಾ, ಆರ್ ಡಿ ಬಾಬು, ವಿವೇಕ್ ಹೊಸಕೋಟೆ, ಮುರುಳಿ, ಕರಿಸುಬ್ಬು, ಧರ್ಮ, ಪ್ರಶಾಂತ್ ಸಿದ್ದಿ, ಮುಂತಾದವರಿದ್ದಾರೆ. ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಸಂಕಲನ, ರಾಕಿ ರಮೇಶ್ ಸಾಹಸ ನಿರ್ದೇಶನ, ವೀರ್ ಸಮರ್ಥ್ ಹಿನ್ನೆಲೆ ಸಂಗೀತವಿದ್ದು, ಕಿರಣ್ ಶಂಕರ್ ಮತ್ತು ಶಿವು ಭೇರಗಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ನಾಗರಾಜ್ ಅರೆಹೊಳೆ ಮತ್ತು ಉಮೇಶ್ ಬಾದರದಿನ್ನಿ ನಿರ್ದೇಶನದ ಈ ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದಲ್ಲಿ ಚಿತ್ರೀಕರಿಸಲಾಗಿದ್ದು, ಬಿರಾದಾರ್ ಅಗರಬತ್ತಿ ಮಾರಾಟಗಾರನ ಪಾತ್ರವನ್ನು ನಿರ್ವಹಿಸಿದ್ದಾರೆ.

 

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago