ಬೆಂಗಳೂರು: ಸ್ಯಾಂಡಲ್ ವುಡ್ನ ಖ್ಯಾತ ನಿರ್ಮಾಪಕ, ಕಿಚ್ಚ ಸುದೀಪ್ ಆಪ್ತ ಜಾಕ್ ಹಾಗೂ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ನಿರ್ಮಾಪಕ ಜಾಕ್ ಮಂಜು ಬನ್ನೇರುಘಟ್ಟ ಬಳಿಯಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎರಡು ದಿನದ ಹಿಂದೆ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮಕ್ಕೆ ಹೋಗಿದ್ದಾಗ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರು. ಕಳೆದ 20 ದಿನದ ಹಿಂದೆ ಈ ಘಟನೆ ನಡೆದಿತ್ತು. ಕೊನೆಗೆ ಕಾಲಿಗೆ ಚಿಕಿತ್ಸೆಯನ್ನು ಪಡೆದಿದ್ದರು. ಆದರೆ, ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ ಊತ ಬಂದಿತ್ತು. ಹೀಗಾಗಿ ಎರಡು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಜಾಕ್ ಮಂಜು ಅವರು ಆಪರೇಷನ್ ಮಾಡಿಸಿಕೊಂಡಿದ್ದು, ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.