ಬೆಂಗಳೂರು: ಕನ್ನಡ ಚಿತ್ರರಂಗವೀಗ ಹೊಸಾ ಹೊಸಾ ಸಿನೆಮಾಗಳಿಗೆ ಅವಕಾಶ ನೀಡುತ್ತಿದ್ದು ಅಂತಹದ್ದೇ ಮತ್ತೊಂದು ಚಿತ್ರವೀಗ ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ತಯಾರಾಗಿದೆ.
`ಸಾರಾಂಶ’ ಎಂಬ ಈ ಚಿತ್ರವನ್ನು ಬಹುಮುಖ ಪ್ರತಿಭೆ ಸೂರ್ಯ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ಶ್ರುತಿ ಹರಿಹರನ್ ಇಲ್ಲಿ ಪ್ರಧಾನ ಪಾತ್ರವೊಂದನ್ನು ನಿರ್ವಹಿಸಿದ್ದಾರೆ.
ಸೂರ್ಯ ವಸಿಷ್ಠ ಮತ್ತು ಗಂಟುಮೂಟೆ ಖ್ಯಾತಿಯ ರೂಪಾ ರಾವ್ ಸಂಭಾಷಣೆ ಬರೆದಿದ್ದಾರೆ. ಆ ದಿನಗಳು, ತಮಸ್ಸು, ಮಠ ಮುಂತಾದ ಸಿನಿಮಾಗಳ ಮೂಲಕ ಖ್ಯಾತರಾಗಿರೋ ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.
ಓರ್ವ ಕಥೆಗಾರ ತಾನು ಸೃಷ್ಟಿಸಿದ ಪಾತ್ರವನ್ನೇ ಎದುರುಗೊಳ್ಳುವ ರೋಮಾಂಚಕ ಕಥಾ ಎಳೆ, ಆ ಪಾತ್ರವನ್ನು ಕಥೆಗಾರ ಬರೆದನೋ, ಆ ಪಾತ್ರವೇ ಕಥೆಗಾರನ ಮೂಲಕ ಬರೆಸಿಕೊಳ್ಳುತ್ತಿದೆಯೋ ಎಂಬಂಥಾ ಸೂಕ್ಷ್ಮ ಕದಲಿಕೆಯ ಸುತ್ತ ಈ ಸಿನಿಮಾ ಚಲಿಸುತ್ತದೆ.
ಮೊಬೈಲ್ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…
ಸೋಷಿಯಲ್ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್ ಮಾಡುತ್ತ, ಹಲ್ಚಲ್ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…
ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್ ಲೀಕ್ ಆಗಿ ರಸ್ತೆಯ…
ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…
ಇಂದು ರಾಜ್ಯದೆಲ್ಲಡೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…