ಬೆಂಗಳೂರು: ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಶಾಖಾಹಾರಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಮಲೆನಾಡಿನ ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು, ಅಡುಗೆ ಭಟ್ಟರಾಗಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶಿವಮೊಗ್ಗದ ಗಂಗಕರ್ಮಿ ಎಸ್ ಆರ್ ಗಿರೀಶ್ ಅವರ ನಾಟಕದ ಸಣ್ಣ ತುಣುಕೊಂದನ್ನು ಆಧಾರವಾಗಿಟ್ಟುಕೊಂಡು ಶಾಖಾಹಾರಿ ಚಿತ್ರಕತೆ ಬರೆಯಲಾಗಿದೆ. ಮಲೆನಾಡಿನ ತಪ್ಪಲಿನಲ್ಲೇ ಈ ಸಿನಿಮಾ ಚಿತ್ರೀಕರಣಗೊಂಡಿದೆ. ಮಲೆನಾಡಿನ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನ ಸಂದೀಪ್ ಸುಂಕದ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ವಿನಯ್ ಯು ಜೆ, ನಿಧಿ ಹೆಗಡೆ, ಹರಿಣಿ ಶ್ರೀಕಾಂತ್, ಸುಜಯ್ ಶಾಸ್ತ್ರಿ, ಪ್ರಶಾಂತ್ ನಟನ, ಶ್ರೀಹರ್ಷ ಗೋಭಟ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.