ಬೆಂಗಳೂರು: ನಟ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಹುಟ್ಟುಹಬ್ಬದ ಖುಷಿಯಲ್ಲಿ ಹೊಸ ಸಿನಿಮಾ ಅನೌನ್ಸ್ ಆಗಿದೆ. ಖ್ಯಾತ ನಿರ್ದೇಶಕ ತರುಣ್ ಸುಧೀರ್ ಮತ್ತು ದರ್ಶನ್ ಅವರ ಕಾಂಬಿನೇಷನ್ನಲ್ಲಿ ‘ವೀರ ಸಿಂಧೂರ ಲಕ್ಷ್ಮಣ’ ಸಿನಿಮಾ ಮೂಡಿಬರಲಿದೆ.
ಇದರಲ್ಲಿ ಐತಿಹಾಸಿಕ ಕಥಾಹಂದರ ಇರಲಿದೆ. ಈ ಮೊದಲು ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದ ದರ್ಶನ್ ಅವರು ಈಗ ಸಿಂಧೂರ ಲಕ್ಷ್ಮಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ.
ಈ ಸಿನಿಮಾವನ್ನು ಶೈಲಜಾ ನಾಗ್ ಮತ್ತು ಬಿ. ಸುರೇಶ ಅವರು ನಿರ್ಮಾಣ ಮಾಡಲಿದ್ದಾರೆ. ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
‘ರಾಬರ್ಟ್’ ಮತ್ತು ‘ಕಾಟೇರ’ ಸಿನಿಮಾಗಳಲ್ಲಿ ತರುಣ್ ಸುಧೀರ್ ಮತ್ತು ದರ್ಶನ್ ಅವರ ಕಾಂಬಿನೇಷನ್ ಜನಮೆಚ್ಚುಗೆ ಗಳಿಸಿತು. ಈಗ ಅವರು ಮೂರನೇ ಬಾರಿಗೆ ಕೈ ಜೋಡಿಸುತ್ತಿರುವುದರಿಂದ ಹೈಪ್ ಹೆಚ್ಚಾಗಲಿದೆ.
‘ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ. ದೊಡ್ಡ ಬಜೆಟ್ನಲ್ಲಿ ಈ ಸಿನಿಮಾ ಮೂಡಿಬರಲಿದೆ’ ಎಂದು ನಿರ್ಮಾಪಕಿ ಶೈಲಜಾ ನಾಗ್ ಅವರು ಹೇಳಿದ್ದಾರೆ.
“ವೀರ ಸಿಂಧೂರ ಲಕ್ಷ್ಮಣನ ಸಾಹಸಗಾಥೆ”
We are beyond thrilled & excited to announce #D59 – the saga of #SindhooraLakshmana, a reunion with my beloved #ChallengingStarDarshan sir and a collaboration with #MediaHouseStudio & #VHarikrishna. Can’t wait to get started! Happy birthday #Dboss!… pic.twitter.com/MW03f6xf0J
— Tharun Sudhir (@TharunSudhir) February 16, 2024