Bengaluru 22°C
Ad

ಡೆಂಗ್ಯೂ ಹೆಚ್ಚಳ; ಎಲ್ಲಾ ಮನೆಗಳ ಸರ್ವೇಗೆ ಆರೋಗ್ಯ ಸಚಿವ​​​ ಸೂಚನೆ

Dengue

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಳ ಆಗುತ್ತಿದ್ದು, ಬೆಂಗಳೂರು ನಗರದ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೆ, ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Ad
300x250 2

ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಡೆಂಗ್ಯೂ ಹರಡುವಿಕೆ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿದ್ದು, ಅದರ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದ್ದು, ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ ಎಂದರು.

ಸದಾ ಮಳೆ ಬರುತ್ತಿದ್ದರೆ, ಡೆಂಗ್ಯೂ ಸೊಳ್ಳೆ ಬರೋದಿಲ್ಲ. ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುತ್ತದೆ. ಇದು ಅನುಕೂಲ ಮಾಡಿಕೊಡುತ್ತದೆ. ಈ ರೀತಿಯ ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ. ಇನ್ನು ಕೆಪಿಎಂ ಆ್ಯಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯವಾಗಿದೆ. ಇಷ್ಟೇ ಅಲ್ಲದೆ ರಾಜ್ಯದಲ್ಲಿ ಮತ್ತಷ್ಟು ಕೇಸ್​ಗಳು ಇರಬಹುದು, ಈ ಕುರಿತು ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ.

ಅದರಂತೆ ರಾಜ್ಯಾದ್ಯಂತ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಈ ವಿಚಾರದಲ್ಲಿ ಫೀಲ್ಡ್ ನಲ್ಲಿ ಇದ್ದು, ಮನೆ ಮನೆ ಸಮೀಕ್ಷೆ ನಡೆಸಿ ಮಾನಿಟರ್ ಮಾಡಲು ಸೂಚಿಸಿದ್ದೇನೆ. ಜನವರಿಯಿಂದ ಜುಲೈ 1 ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. 2903 ಕಳೆದ ವರ್ಷ ದಾಖಲಾಗಿತ್ತು. ಈ ವರ್ಷ 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ. ಇನ್ನೂ ಡೆಂಘಿ ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ. ಸಿಎಂ ಕೂಡ ಎಚ್ಚರಿಕೆ ವಹಿಸಲು ತಿಳಿಸಿದ್ದಾರೆ ಎಂದರು.

Ad
Ad
Nk Channel Final 21 09 2023
Ad