ಪುಣೆ: ಪುಣೆ ತುಳುಕೂಟದ ವಾರ್ಷಿಕ ಕ್ರೀಡೋತ್ಸವವು ನೂರಾರು ಮಂದಿ ಪಾಲ್ಗೋಳ್ಳುವಿಕೆಯೊಂದಿಗೆ ನಗರದ ಗರ್ವಾರೆ ಕಾಲೇಜು ಮೈದಾನದಲ್ಲಿ ಡಿ.17ರಂದು ಯಶಸ್ವಿಯಾಗಿ ನೆರವೇರಿತು.
ಪುಣೆ ತುಳುಕೂಟದ ವಾರ್ಷಿಕ ಕ್ರೀಡೋತ್ಸವವನ್ನು ಗುರುದೇವಾ ಸೇವಾ ಬಳಗದ ಅಧ್ಯಕ್ಷರಾ ಸದಾನಂದ ಕೆ. ಶೆಟ್ಟಿ ಅವರು ಬಲೂನ್ ಹಾರಿಬಿಡುವ ಮೂಲಕ ಉದ್ಘಾಟಿಸಿದರು.
ಉದ್ಘಾಟನಾ ಭಾಷಣಗೈದ ಸದಾನಂದ ಶೆಟ್ಟಿ ಅವರು, ಕ್ರೀಡೋತ್ಸವದಿಂದಾಗಿ ಪ್ರತಿನಿತ್ಯ ವ್ಯಾಯಾಮ ಮಾಡಬೇಕೆನ್ನುವ ಸಂದೇಶವನ್ನು ಸಾರಿದಂತಾಗುವುದು. ಇದು ಅಭಿನಂದನೀಯ. ನಮ್ಮ ದೇಹ ದೇಗುಲವಿದ್ದಂತೆ. ಶರೀರವೇ ಜೀವನದ ಪ್ರಮುಖ ಮಾಧ್ಯಮ. ಅದನ್ನು ಆರೋಗ್ಯವಂತರಾಗಿ ಜತನದಿಂದ ಕಾಪಾಡಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿ, ಸಂಘದ ಗೌರವಾಧ್ಯಕ್ಷ ಮಿಯಾರು ರಾಜ್ಕುಮಾರ್ ಎಂ. ಶೆಟ್ಟಿ, ಉಪಾಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಎಣ್ಣೆಹೊಳೆ, ಕ್ರೀಡಾ ಕಾರ್ಯಾಧ್ಯಕ್ಷ ಯಶವಂತ್ ಶೆಟ್ಟಿ ತಾಮಾರು, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್ ಶೆಟ್ಟಿ, ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಸಂಯೋಜಕರಾಗಿರುವ ರಂಜಿತಾ ರಮೇಶ್ ಶೆಟ್ಟಿ ಮತ್ತು ರಮಾ ಶೆಟ್ಟಿ ಉಪಸ್ಥಿತರಿದ್ದರು.