ಶೆಟ್ಟಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆಯುವ ವಿಶ್ವ ಬಂಟರ ಸಮ್ಮಿಲನದ ಪೂರ್ವಭಾವಿ ಸಭೆಯು ಆ.13ರಂದು ಪುಣೆ ನಗರದ ಕೊರೊನೆಟ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಕಾರ್ಯಕ್ರಮದ ರೂಪುರೇಷೆಯ ಕುರಿತು ವಿವರಿಸಿದರು. ಈ ವೇಳೆ ಐಕಳ ಹರೀಶ್ ಶೆಟ್ಟಿ ಅವರು ನಾಯಕತ್ವದ ಕುರಿತು ವೇದಿಕೆಯಲ್ಲಿದ್ದ ಗಣ್ಯರು ಕೊಂಡಾಡಿದರು. ಸಭೆಯಲ್ಲಿ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಓಣಿಮಜಲು ಜಗನ್ನಾಥ ಶೆಟ್ಟಿ, ಪಿಂಪ್ರಿ-ಚಿಂಚಾಡ್ ಬಂಟರ ಸಂಘದ ಅಧ್ಯಕ್ಷ ಮಹೇಶ್ ಹೆಗ್ಡೆ ಕಟ್ಟಿಂಗೇರಿಮನೆ. ಮುಂಬಯಿ ಬಂಟರ ಸಂಘದ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮವು ಸುಮಾರು 50ಲಕ್ಷ ವೆಚ್ಚದಲ್ಲಿ ದೊಡ್ಡ ಮಟ್ಟದಲ್ಲಿ ನಡೆಯಲಿದೆ.