ಉಡುಪಿ: ಅಮೆರಿಕಾದ ಹ್ಯೂಸ್ಟನ್ ನಗರದ ಪುತ್ತಿಗೆ ಮಠದಲ್ಲಿ ಪ್ರಪ್ರಥಮ ಬಾರಿಗೆ ಉಡುಪಿ ಶಿವಳ್ಳಿ ಮೂಲದ ಅಮೇರಿಕಾದಲ್ಲಿ ನೆಲೆಸಿರುವ ಅನಿವಾಸಿ ವಿಪ್ರ ಬಂಧುಗಳ ಸಮಾವೇಶವನ್ನು ಆಯೋಜಿಸಲಾಯಿತು.
ಉಡುಪಿ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರು ಉಡುಪಿ ಶ್ರೀಕೃಷ್ಣನ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಿವಳ್ಳಿ ಕುಟುಂಬ ತಮ್ಮ ಪರಂಪರೆಯನ್ನು ಎತ್ತಿ ಹಿಡಿದಿದ್ದು, ಶ್ರೀ ಕೃಷ್ಣನ ವಿಶೇಷ ಅನುಗ್ರಹಕ್ಕೆ ಪಾತ್ರವಾಗಿದೆ ಎಂದರು .
ಅಮೆರಿಕಾದ್ಯಂತ ಐನ್ನೂರುಗಿಂತಲೂ ಅಧಿಕ ಮಂದಿ ಸಮಾವೇಶದಲ್ಲಿ ಭಾಗವಹಿಸಿದ್ದರು.