Categories: ಅಮೇರಿಕಾ

ಅಮೆರಿಕದಲ್ಲಿ ಅಕ್ಕಿ ಖರೀದಿಗೆ ಮುಗಿಬಿದ್ದ ಜನ: ದರ ದುಪಟ್ಟು

ವಾಷಿಂಗ್ಟನ್: ಭಾರತ ಇತ್ತೀಚೆಗೆ ಬಾಸ್ಮತಿಯೇತರ ಬಿಳಿ ಅಕ್ಕಿ ರಫ್ತಿನ ಮೇಲೆ ನಿಷೇಧ ಹೇರಿದ ನಂತರ ಅಮೆರಿಕದಾದ್ಯಂತ ಜನರು ಆತಂಕಗೊಂಡಿದ್ದು ಅಕ್ಕಿ ಖರೀದಿಗೆ ಮುಗಿಬಿದ್ದಿದ್ದಾರೆ. ಅಕ್ಕಿ ಖರೀದಿ, ಸಂಗ್ರಹಣೆಗೆ ಜನ ಧಾವಿಸುತ್ತಿದ್ದು, ಬೆಲೆ ಸಿಕ್ಕಾಪಟ್ಟೆ ಏರಿಕೆ ಆಗಿದೆ. ಭಾರತವು ಪ್ರಮುಖ ಅಕ್ಕಿ ರಫ್ತುದಾರನಾಗಿರುವುದರಿಂದ ಕಳೆದ ವಾರ ಘೋಷಿಸಲಾದ ನಿಷೇಧವು ಜಾಗತಿಕ ಆಹಾರ ಮಾರುಕಟ್ಟೆಯಲ್ಲಿ ಆಘಾತವನ್ನು ಉಂಟುಮಾಡಿದೆ. ವಾಷಿಂಗ್ಟನ್‌ನಲ್ಲಿ ವಾಸಿಸುವ ಅರುಣಾ ಎಂಬುವವರು ಈ ಬಗ್ಗೆ ಮಾತನಾಡಿ ಆತಂಕ ಹೊರಹಾಕಿದ್ದಾರೆ.

‘ನಾನು ಸುಮಾರು 10 ಕ್ಕಿಂತಲೂ ಹೆಚ್ಚು ಸ್ಟೋರ್‌ಗಳಿಗೆ ಭೇಟಿ ನೀಡಿದ್ದೇನೆ. ನಾನು ಬೆಳಿಗ್ಗೆ 9 ಗಂಟೆಗೆ ಸೋನಾ ಮಸೂರಿ ಅಕ್ಕಿ ಚೀಲವನ್ನು ಹುಡುಕಲು ಪ್ರಾರಂಭಿಸಿದೆ. ಸಂಜೆ 4 ಗಂಟೆಗೆ ಮೂರು ಪಟ್ಟು ಬೆಲೆಗೆ ಒಂದು ಅಕ್ಕಿ ಚೀಲ ಸಿಕ್ಕಿತು ಎಂದಿದ್ದಾರೆ.

ಅನಿವಾಸಿ ಭಾರತೀಯರು ಭಾರತೀಯ ಪಾಕಪದ್ಧತಿಯಲ್ಲಿ ಪ್ರಧಾನವಾದ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ತಮ್ಮ ಪೂರೈಕೆಯನ್ನು ಪಡೆಯಲು ಹರಸಾಹಸ ಮಾಡುತ್ತಿರುವಾಗ ನಿಷೇಧದ ಸುದ್ದಿ ಹೊಡೆತ ನೀಡಿದೆ. ದೈತ್ಯ ಮಳಿಗೆಗಳಲ್ಲಿ ಉಳಿದಿರುವ ಅಕ್ಕಿ ಚೀಲಗಳನ್ನು ಖರೀದಿಸಲು ಜನರು ಮುಗಿ ಬೀಳುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಸಪ್ನಾ ಫುಡ್ಸ್‌ನಲ್ಲಿ, ಮೇರಿಲ್ಯಾಂಡ್‌ನ ಸಗಟು ಮಾರಾಟಗಾರ, ಮಾಲೀಕ ತರುಣ್ ಸರ್ದಾನ ಅವರು ಅಕ್ಕಿಗೆ ಭಾರೀ ಬೇಡಿಕೆ ಇದೆ ಎಂದು ಹೇಳಿದ್ದಾರೆ.

 

Ashitha S

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

3 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

6 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

36 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

43 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

55 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago