ಬುರೈದ: ಹೃದಯಾಘಾತದಿಂದ ಮೃತಪಟ್ಟ ತಮಿಳುನಾಡು ಮೂಲದ ಮೊಹಮ್ಮದ್ ಅಶ್ರಫ್ ಅಲಿ ಎಂಬ ವ್ಯಕ್ತಿಯ ಅಂತ್ಯಕ್ರಿಯೆಗೆ ಇಂಡಿಯನ್ ಸೋಶಿಯಲ್ ಫೋರಂ ಅಲ್-ಖಸೀಮ್ ಘಟಕ ನೆರವಾಗಿದೆ.
ಮೃತರು ಒಂದು ತಿಂಗಳ ಹಿಂದೆಯಷ್ಟೇ ಸೌದಿ ಅರೇಬಿಯಾದ ಬುರೈದ ನಗರಕ್ಕೆ ಮನೆ ಕೆಲಸಕ್ಕಾಗಿ ಬಂದಿದ್ದರು ಹಾಗೂ ಕೆಲಸ ನಿರ್ವಹಿಸುತ್ತಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕುಟುಂಬಸ್ಥರ ಸಂಪರ್ಕದ ಕೊರತೆ ಮತ್ತು ಅಸಮರ್ಪಕ ದಾಖಲೆಯಿಂದ ಬುರೈದದ ಕಿಂಗ್ ಫಹದ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದ ಮೃತದೇಹದ ಅಂತ್ಯಕ್ರಿಯೆಗಾಗಿ ಸ್ಥಳೀಯರು ಇಂಡಿಯನ್ ಸೋಶಿಯಲ್ ಫೋರಂ ನೆರವು ಕೋರಿದ್ದರು.
ತಕ್ಷಣ ಕಾರ್ಯಪ್ರವೃತರಾದ ಇಂಡಿಯನ್ ಸೋಶಿಯಲ್ ಫೋರಂ, ಅಲ್-ಖಸೀಮ್ ಘಟಕದ ಕಾರ್ಯಕರ್ತರಾದ ಅಯಾಝ್ ಕಾಟಿಪಳ್ಳ, ಇರ್ಫಾನ್ ಅಡ್ಡೂರ್ ಮತ್ತು ಮೊಹಮ್ಮದ್ ಶೇಕ್ ರವರು ಮೃತರ ಪ್ರಾಯೋಜಕರು ಹಾಗೂ ಮನೆಯವರ ಅನುಮತಿ ಪತ್ರದೊಂದಿಗೆ ಸ್ಥಳೀಯ ಪೋಲಿಸ್ ಠಾಣೆ ಮತ್ತು ಆಸ್ಪತ್ರೆಯ ನಿರಂತರ ಭೇಟಿಯ ನಂತರ ದೃಢೀಕರಣ ಪತ್ರದೊಂದಿಗೆ ಮಸ್ಜಿದ್ ಅಲ್-ಖಲೀಜ್ಹ್ ನಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.
ಇಂಡಿಯನ್ ಸೋಶಿಯಲ್ ಫೋರಂನ ಮಾನವೀಯ ನೆರವಿಗೆ ಮೃತರ ಸಂಬಂಧಿಗಳು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…