News Karnataka Kannada
Monday, April 29 2024
ಹೊರನಾಡ ಕನ್ನಡಿಗರು

ದುಬೈ: ಪುತ್ತಿಗೆ ಶ್ರೀಗಳಿಗೆ ಭವ್ಯ ಸ್ವಾಗತ, ಡಿ.23ರವರೆಗೆ ಶ್ರೀಗಳಿಂದ ದುಬೈ, ಅಬುದಾಭಿ ಸಂಚಾರ

Puthige Sri gets a grand welcome in Dubai, travels to Dubai, Abu Dhabi till December 23
Photo Credit : By Author

ದುಬೈ: ಶ್ರೀ ರಾಘವೇಂದ್ರ ಸೇವಾ ಸಮಿತಿ ಸದಸ್ಯರಿಂದ ಭಾವಿ ಪರ್ಯಾಯ ಉಡುಪಿ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭವ್ಯ ಸ್ವಾಗತದೊಂದಿಗೆ ದುಬೈಗೆ ಬರಮಾಡಿಕೊಳ್ಳಲಾಯಿತು.

ಈ‌ ವೇಳೆ ಸಮಿತಿಯ ‌ಸದಸ್ಯರು ಶ್ರೀಗಳಿಗೆ ಸಾಮೂಹಿಕ ಪಾದಪೂಜೆ, ತೊಟ್ಟಿಲುಪೂಜಾ ಸೇವೆ ನಡೆಸಿ, ಭವ್ಯ ಅಭಿನಂದನಾ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನಾಚಾರ್ಯ ಮತ್ತು ಅರ್ಚಕ ಶ್ರೀಪತಿ ಉಪಾಧ್ಯಾಯ ಅವರನ್ನು ಗೌರವಿಸಲಾಯಿತು. ದುಬೈಯಲ್ಲಿ ನೂರಾರು ಮಂದಿಯನ್ನು ಭಗವದ್ಗೀತಾ ಪ್ರಚಾರಕ್ಕೆ ಪ್ರೇರೇಪಿಸಿದ ಸುರೇಶ್ ಅವರನ್ನು ಸನ್ಮಾನಿಸಲಾಯಿತು . ಸಂಯೋಜಕ ಹರಿಪ್ರಸಾದ್ ವಂದಿಸಿದರು. ಶ್ರೀಪಾದರು ದುಬೈ, ಅಬುದಾಭಿಯಲ್ಲಿ ಡಿಸೆಂಬರ್ 23 ರವರೆಗೆ ಸಂಚರಿಸಲಿದ್ದಾರೆ .

ಅಬುದಾಭಿಯ ಸಚಿವರನ್ನು‌ ಭೇಟಿ ಮಾಡಿದ ಉಡುಪಿ ಪುತ್ತಿಗೆ ಶ್ರೀ

ಅಬುದಾಭಿಯಲ್ಲಿಂದು ಸರಕಾರದ ಕ್ಯಾಬಿನೇಟ್ ಸಚಿವ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅವರನ್ನು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಸೌಹಾರ್ದ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರಿಗೆ ಶ್ರೀಪಾದರು ತಮ್ಮ ಸಮಾಜಮುಖಿ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದ ಬಗ್ಗೆ ವಿವರಿಸಿದರು. ಮಂತ್ರಿಗಳು ಶ್ರೀಗಳ ವಿಶ್ವಶಾಂತಿ ನಾಯಕತ್ವದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಶ್ರೀಗಳು ತಮ್ಮ ಮುಂಬರುವ ಶ್ರೀ ಕೃಷ್ಣ ಪೂಜಾ ಪರ್ಯಾಯಕ್ಕೆ ಪ್ರೀತಿಪೂರ್ವಕ ಆಹ್ವಾನಿಸಿದಾಗ ಮಂತ್ರಿಗಳು ಸಂತೋಷದಿಂದ ಒಪ್ಪಿಗೆ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು