News Karnataka Kannada
Monday, April 29 2024
ಹೊರನಾಡ ಕನ್ನಡಿಗರು

ಇಂಡಿಯನ್ ಸೋಶಿಯಲ್ ಫಾರಂ ಬುರೈದ ವತಿಯಿಂದ ಸಂಭ್ರಮದ ಸ್ನೇಹ ಸಮ್ಮಿಲನ

Untitled 1 Recovered
Photo Credit :

ಬುರೈದ: ಇಂಡಿಯನ್ ಸೋಶಿಯಲ್ ಫಾರಂ ಕರ್ನಾಟಕ ಬುರೈದ ವತಿಯಿಂದ ಸ್ನೇಹ ಸಮ್ಮಿಲನ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 23ನೇ ಗುರುವಾರ ರಾತ್ರಿ ಬುರೈದದ ಅಲ್ ಸಧೀಮ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.

ಬುರೈದದ ವಿವಿಧ ಭಾಗಗಳಿಂದ ಅನಿವಾಸಿ ಭಾರತೀಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದು ಇಂಡಿಯನ್ ಸೋಶಿಯಲ್ ಫಾರಂ ಕೇರಳ ಬ್ಲಾಕ್ ಅಧ್ಯಕ್ಷರಾದ ಫಿರೋಜ್ ಪಿ ಕೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಂಡಿಯನ್ ಸೋಶಿಯಲ್ ಫಾರಂ ಬುರೈದಾ ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ರಶೀದ್ ಉಚ್ಚಿಲ ಮಾತನಾಡಿ ಇಂಡಿಯನ್ ಸೋಶಿಯಲ್ ಫಾರಂ ಸೌದಿ ಅರೇಬಿಯಾದಲ್ಲಿ ಹಲವು ವರ್ಷಗಳಿಂದ ಅನಿವಾಸಿ ಭಾರತೀಯರು ಸೇವೆಯಲ್ಲಿ ತೊಡಗಿದ್ದು ಎಲ್ಲರೂ ಅನಿವಾಸಿ ಭಾರತೀಯರ ಸಂಕಷ್ಟ ನಿವಾರಿಸಲು ಇಂಡಿಯನ್ ಸೋಶಿಯಲ್ ಫಾರಂನಲ್ಲಿ ಕೈಜೋಡಿಸಲು ಕರೆ ನೀಡಿದರು.

ದಿಕ್ಸೂಚಿ ಭಾಷಣ ಮಾಡಿದ ಇಂಡಿಯನ್ ಸೋಶಿಯಲ್ ಫಾರಂ ಕರ್ನಾಟಕ ರಾಜ್ಯ ಸಮಿತಿ ರಿಯಾದ್ ಇದರ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಮಾತನಾಡಿ ದೇಶದ ಆಡಳಿತ ನಡೆಸುತ್ತಿರುವ ಸರಕಾರ ಫ್ಯಾಸಿಸ್ಟ್ ಸರಕಾರವು ಸಾಂವಿಧಾನಿಕ ಮೌಲ್ಯಗಳನ್ನು ನಾಶ ಪಡಿಸುವಲ್ಲಿ ಸಫಲತೆಯನ್ನು ಕಾಣುತ್ತಿದೆ ಇದರ ವಿರುದ್ಧ ಹೋರಾಡಲು ಮತ್ತು ದೇಶದ ಎಲ್ಲಾ ವರ್ಗದ ಜನರ ಹಕ್ಕುಗಳ ಸಂರಕ್ಷಣೆಗಾಗಿ ನಾವೆಲ್ಲರೂ ಒಂದಾಗಬೇಕೆಂದು ಕರೆ ನೀಡಿದರು.

ಸಭಾಕಾರ್ಯಕ್ರಮದಲ್ಲಿ ಉದ್ಯಮಿ ಸಾಧಿಕ್ ಕಾಟಿಪಳ್ಳ ಜಿ ಜಿ ಸಿ ಸಿ ಮಲ್ಗುರ್ ಅಧ್ಯಕ್ಷ ಉಮರ್ ಫಾರೂಕ್ ಉದ್ಯಮಿ ಇನಾಯತ್ ಅಲ್ಲಿ ಬೆಂಗಳೂರು, ಇಂಡಿಯಾ ಫ್ರೆಟರ್ನಿಟಿ ಫೋರಂ ಬುರೈದ ಅಧ್ಯಕ್ಷರಾದ ಆಯಾಜ್ ಕಾಟಿಪಳ್ಳ, ಗರ್ಲ್ಸ್ ಕಮಿಟಿ ಆಡೂರ್ ಅಧ್ಯಕ್ಷ ಅಬ್ದುಲ್ ರಝಾಕ್ ಫೇಸಿ ಕುಮಾರ ಅಧ್ಯಕ್ಷ ಅಶ್ರಫ್ ಬುಳೇರಿಕಟ್ಟೆ ಮರ್ಕಝುಲ್ ಹುದಾ ಅಧ್ಯಕ್ಷ ಸೈಯದ್ ವೈಯೆಮ್ ಕೆ ಮತ್ತು ನಜಮ್ ರಫೀಕ್ ರವರು ವೇದಿಕೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಲವಾರು ಜನರು ಇಂಡಿಯನ್ ಸೋಶಿಯಲ್ ಫಾರಂ ತತ್ವ ಮತ್ತು ಸಿದ್ಧಾಂತಗಳಿಗೆ ಒಪ್ಪಿ ಹೊಸ ಸದಸ್ಯತ್ವ ಸ್ವೀಕರಿಸಿದರು.

ಇಂಡಿಯನ್ ಸೋಶಿಯಲ್ ಫಾರಂ ಪೂರೈಸಿದ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ್ ಪುಂಜಲಕಟ್ಟೆ ಸ್ವಾಗತಿಸಿದರು ಇಂಡಿಯನ್ ಸೋಶಿಯಲ್ ಫಾರಂ ಕಾರ್ಯಕರ್ತರಾದ ದ ಝಕರಿಯ ಕೊರಂಗಿಲ ಕಾರ್ಯಕ್ರಮ ನಿರೂಪಿಸಿದರೆ ಮೋಯಿನುದ್ದಿನ್ ಪಡುಬಿದ್ರಿ ಧನ್ಯವಾದ ಸಮರ್ಪಿಸಿದರು.

ಸಾಕಷ್ಟು ಕುತೂಹಲ ಕೆರಳಿಸಿದ ಕ್ರೀಡಾಕೂಟದಲ್ಲಿ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ಮೊದಲ ಸ್ಥಾನವನ್ನು ಅಲ್ ಹರ್ಬಿ ಕ್ರಿಕೆಟರರ್ಸ್ ಅಲಂಕರಿಸಿದರೆ ದ್ವಿತೀಯ ಸ್ಥಾನವನ್ನು ಫ್ರೆಂಡ್ಸ್ ಫಾರೆವರ್ ಪಡೆಯಿತು. ಹಗ್ಗಜಗ್ಗಾಟದಲ್ಲಿ ಕಾಕಾ ಗೈಸ್ ಮೊದಲ ಸ್ಥಾನ ತನ್ನದಾಗಿಸಿಕೊಂಡರೆ ದ್ವಿತೀಯ ಸ್ಥಾನ ಬುರೈದಾ ಫ್ರೆಂಡ್ಸ್ ಪಡೆಯಿತು. ಹಾಗೂ ಮಹಿಳೆಯರಿಗಾಗಿ ಮತ್ತು ಮಕ್ಕಳಿಗಾಗಿ ಅನೇಕ ಆಕರ್ಷಕ ಕ್ರೀಡೆ ಏರ್ಪಡಿಸಲಾಯಿತು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸೈಯದ್ ಅಲಿ, ಕಿನ್ನಿಗೋಳಿ ಸಾಧಿಕ್ ಕಾಟಿಪಳ್ಳ, ಮೋಯಿನುದ್ದಿನ್ ಪಡುಬಿದ್ರಿ, ಆಸಿಫ್ ಸಾಲ್ಮರ, ಹಫೀಸ್ ಕೃಷ್ಣಾಪುರ, ಸಿದ್ದಿಕ್ ಮಲ್ಗುರ್, ಹಮೀದ್ ಕಿಬಾ ಶರೀಫ್ ಕುಕ್ಕುವಳ್ಳಿ, ಗುಲ್ಜರ್ ಅಡೂರ್, ರಫೀಕ್, ನಜಮ್, ರಿಯಾಜ್ ಸಚ್ಚರಿಪೇಟೆ ಮತ್ತು ಅದ್ದು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು