ಅನಿಲ್ ಕಪೂರ್ ಮನೆಯಲ್ಲಿ ಮದುವೆ ಸಂಭ್ರಮ

ಮುಂಬೈ : ಬಾಲಿವುಡ್ ನಟ ಅನಿಲ್ ಕಪೂರ್ ಹಾಗೂ ಸುನೀತಾ ಕಪೂರ್ ದಂಪತಿಯ ಪುತ್ರಿ ರಿಯಾ ಕಪೂರ್ ಇಂದು ಸಪ್ತಪದಿ ತುಳಿಯಲಿದ್ದಾರೆ.ಅನಿಲ್ ಕಪೂರ್ ಅವರ ಜುಹು ಮನೆಯಲ್ಲಿ ಈ ಮದುವೆ ಸಮಾರಂಭ ನಡೆಯಲಿದ್ದು, ಕೆಲವೇ  ಕುಟುಂಬಸ್ಥರು, ಆತ್ಮೀಯರಿಗೆ
ಆಹ್ವಾನಿಸಲಾಗಿದೆ. ಮೂರು ದಿನಗಳ ಕಾಲ ಮದುವೆ ಸಂಭ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ .
ಅನಿಲ್ ಕಪೂರ್ ಅವರ ಮನೆ  ವಿಧ ವಿಧವಾದ ಬಣ್ಣಗಳ ಬೆಳಕು, ಹೂವಿನ ಅಲಂಕಾರದಿಂದ ಮನೆಕಂಗೋಳಿಸುತ್ತಿದ್ದೂ . ಅನೇಕರು ಮನೆಯನ್ನು ಸಿಂಗಾರ ಮಾಡುತ್ತಿದ್ದಾರೆ. ಮನೆಯ ಮುಂದೆ ಶಾಸ್ತ್ರಗಳು ನಡೆಯುತ್ತಿವೆ. ವರ್ಷಗಳಿಂದ ಪತಿಯ ಜೊತೆ ನಟಿ ಸೋನಂ ಕಪೂರ್ ಅವರು ಲಂಡನ್‌ನಲ್ಲಿ ನೆಲೆಸಿದ್ದಾರೆ. ಸಹೋದರಿ ಮದುವೆ ಸಲುವಾಗಿಯೇ ಕಳೆದ ತಿಂಗಳು ಪತಿ ಆನಂದ್ ಅಹುಜಾ ಜೊತೆ ನಟಿ ಸೋನಂ ಕಪೂರ್ ಮುಂಬೈಗೆ ಬಂದಿಳಿದಿದ್ದಾರೆ.
ರಿಯಾ ಅವರು ಕರಣ್ ಬೂಲಾನಿಯನ್ನು 13 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಕರಣ್ ಬೂಲಾನಿ ಅವರು ನಿರ್ದೇಶಕರಾಗಿದ್ದು, ಅನೇಕ ಜಾಹೀರಾತುಗಳನ್ನು ಮಾಡಿದ್ದಾರೆ. ಅಷ್ಟೇ ಅಲ್ಲದೆ ‘ಐಷಾ’, ‘ವೇಕಪ್ ಸಿದ್’ ಸಿನಿಮಾದಲ್ಲಿಯೂ ಕೆಲಸ ಮಾಡಿದ್ದು, ಆ ಚಿತ್ರಗಳಿಗೆ ರಿಯಾ ಅವರೇ ಹಣ ಹೂಡಿದ್ದರು. ಈ ಹಿಂದೆ ಅನಿಲ್ ಕಪೂರ್ ಕುಟುಂಬದ ಅನೇಕ ಕಾರ್ಯಕ್ರಮಗಳಲ್ಲಿ ಕರಣ್ ಹಾಜರಿ ಹಾಕುತ್ತಿದ್ದರು.
ರಿಯಾ ಕಪೂರ್ ನಿರ್ಮಾಪಕಿ, ಉದ್ಯಮಿ, ಫ್ಯಾಷನ್ ಸ್ಟೈಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಸೋನಂ ಹಾಗೂ ರಿಯಾ ಅವರದ್ದೇ ಆದ ಬ್ರ್ಯಾಂಡ್ ಇದೆ. 2010ರಲ್ಲಿ ‘ಐಷಾ’ ಸಿನಿಮಾ ಮೂಲಕ ನಿರ್ಮಾಪಕಿ ಸ್ಥಾನಕ್ಕೆ ಏರಿದ ರಿಯಾ ಅವರು ಪುರುಷ ಪ್ರಧಾನ ಸಮಾಜದಲ್ಲಿ ನಿರ್ಮಾಪಕಿಯಾಗಿ ಕೆಲಸ ಮಾಡೋದು ಎಷ್ಟು ಕಷ್ಟ ಎಂದು ಈ ಹಿಂದೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ‘ಖೂಬ್‌ಸೂರತ್’, ‘ವೀರೆ ದಿ ವೆಡ್ಡಿಂಗ್’ ಸಿನಿಮಾಕ್ಕೂ ರಿಯಾ ಹಣ ಹೂಡಿದ್ದರು.
Raksha Deshpande

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago