ಅಷ್ಟು ಸುಲಭವಿರಲಿಲ್ಲ ಸಿದ್ಧಾರ್ಥ್ ಶುಕ್ಲರ ಜೀವನ ಹಾದಿ

ಮುಂಬೈ : ಬಾಲಿವುಡ್ ನಟ ಸಿದ್ಧಾರ್ಥ್ ಶುಕ್ಲಾರ ಸಾವು ಎಲ್ಲರಿಗೂ ಆಘಾತವುಂಟುಮಾಡಿದೆ. ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.ಸಿದ್ಧಾರ್ಥ್ ಟಿವಿ ಕಾರ್ಯಕ್ರಮ ಬಾಲಿಕಾ ವಧು ಮೂಲಕ  ಜನಪ್ರಿಯತೆಯನ್ನು ಗಳಿಸಿದರೂ, ಅವರು ಬಿಗ್ ಬಾಸ್ 13 ರ ವಿಜೇತರಾಗುವ ಮೂಲಕ ಹೆಚ್ಚು ಪ್ರಸಿದ್ಧರಾದರು.

ಮನೆಯಲ್ಲಿ  ಸಿದ್ಧಾರ್ಥ ಮೇಲೆ ಎಲ್ಲರಿಗೂ ಹೆಚ್ಚು ಪ್ರೀತಿ ಎಂದು ಬಿಗ್ ಬಾಸ್‌ಗೆ ಹೋದ ನಂತರ, ಅವರ ಅಕ್ಕ ಸಂದರ್ಶನವೊಂದರಲ್ಲಿ ಹೇಳಿದ್ದರು. ಸಿದ್ಧಾರ್ಥ್ ಯಾವಾಗಲೂ 3 ಜನರ ಕಾವಲಿನಲ್ಲಿರುತ್ತಾನೆ. ಆತನ ಇಬ್ಬರು ಹಿರಿಯ ಸಹೋದರಿಯರು ಮತ್ತು ತಾಯಿ ಯಾವಾಗಲೂ ಅವನ ಮೇಲೆ ಕಣ್ಣಿಟ್ಟಿದ್ದರು ಎಂದು ಹೇಳಿದ್ದರು.

ಸಿದ್ಧಾರ್ಥ್ ಶುಕ್ಲಾ ತನ್ನ ತಾಯಿ ರೀತಾಗೆ ತುಂಬಾ ಆಪ್ತರಾಗಿದ್ದರು. ತಂದೆಯ ಮರಣದ ನಂತರ, ತಾಯಿ ಅವರನ್ನು ಏಕಾಂಗಿಯಾಗಿ ಬೆಳೆಸಿದರು. ತಾಯಿ ಇಲ್ಲದೆ ಅವರು ಒಂದು ಕ್ಷಣವೂ ಬದುಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಕೆಲವು ವರ್ಷಗಳ ಹಿಂದೆ, ಹ್ಯೂಮನ್ಸ್ ಆಫ್ ಬಾಂಬೆಗೆ ನೀಡಿದ ಸಂದರ್ಶನದಲ್ಲಿ ಸಿದ್ಧಾರ್ಥ್ ತನ್ನ ತಾಯಿಯ ಹೋರಾಟದ ಬಗ್ಗೆ ಹೇಳಿದ್ದರು.

15 ವರ್ಷಗಳ ಹಿಂದೆ ತಂದೆ ತೀರಿಕೊಂಡಾಗ ಮನೆಯ ಸೂರು ನಮ್ಮ ತಲೆಯಿಂದ ಕಿತ್ತುಕೊಂಡಂತೆ ಭಾಸವಾಯಿತು. ಆದರೆ ನನ್ನ ತಾಯಿ  ಬೆಟ್ಟದಂತೆ ಬಲವಾಗಿ ಇದ್ದರು. ತಾಯಿ ತನ್ನನ್ನು ಸೋಲಲು ಬಿಡಲಿಲ್ಲ.

ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರದಿದ್ದರೂ, ತಾಯಿ ಮೂರು ಮಕ್ಕಳನ್ನು ಚೆನ್ನಾಗಿ ಬೆಳೆಸಿದರು ಮತ್ತು ಎಲ್ಲಾ ಬೇಡಿಕೆಗಳನ್ನು ಪೂರೈಸಿದರು. ನಮ್ಮ ಬೇಡಿಕೆಯನ್ನು ಈಡೇರಿಸಲು ಅವರು ತನ್ನ ಅನೇಕ ಆಸೆಗಳನ್ನು ತ್ಯಾಗ ಮಾಡಿದರು ಎಂದು ತಾಯಿ ಬಗ್ಗೆ ಹೇಳಿದ್ದರು ಸಿದ್ಧಾರ್ಥ್ ಶುಕ್ಲಾ.

Raksha Deshpande

Recent Posts

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

2 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

16 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

17 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

23 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

33 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

45 mins ago