Categories: ಮುಂಬೈ

ಇಂದು ಹೈಕೋರ್ಟಲ್ಲಿ ಶಾರುಖ್​ ಪುತ್ರ ಆರ್ಯನ್​ ಖಾನ್​ ಜಾಮೀನು ಪ್ರಕರಣ

ಮುಂಬೈ: ಮುಂಬೈನ ಕ್ರೂಸ್​ ಶಿಪ್​ ಡ್ರಗ್ಸ್​ ಕೇಸಿನಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಬಾಲಿವುಡ್​ ನಟ ಶಾರುಖ್​ ಖಾನ್​​ ಪುತ್ರ ಆರ್ಯನ್​ ಖಾನ್​ರ ಜಾಮೀನಿಗೆ ಸಂಬಂಧಿಸಿದಂತೆ ಇಂದು ಬಾಂಬೆ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ. ಹೈಕೋರ್ಟಿನಲ್ಲಿ ಆರ್ಯನ್​ ಪರವಾಗಿ ಭಾರತದ ಮಾಜಿ ಅಟೋರ್ನಿ ಜನರಲ್ ಮುಕುಲ್ ರೋಹಟಗಿ ವಾದ ಮಂಡಿಸಲಿದ್ದಾರೆ.

ಸುಪ್ರೀಂ ಕೋರ್ಟ್​ನ ಹಿರಿಯ ವಕೀಲರಾಗಿರುವ ಮುಕುಲ್​ ರೋಹಟಗಿ, 2014 ರಿಂದ 2017 ರವರೆಗೆ ಭಾರತದ ಅಟೋರ್ನಿ ಜನರಲ್​ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ರೋಹಟಗಿ ಅವರು ಎನ್​ಸಿಬಿಯನ್ನು ‘ಮರಳಿನಲ್ಲಿ ತಲೆ ಹೂಳಿಕೊಂಡಿರುವ ಉಷ್ಟ್ರಪಕ್ಷಿ’ ಎಂಬುದಾಗಿ ಬಣ್ಣಿಸಿ ಟೀಕಿಸಿದ್ದು ಸುದ್ದಿಯಾಗಿತ್ತು. ಆರ್ಯನ್​ ಕೇಸಿನ ತಯಾರಿಗಾಗಿ ನಿನ್ನೆಯೇ ಮುಂಬೈ ತಲುಪಿರುವ ಅವರು, ಹೈಕೋರ್ಟ್​ನಲ್ಲಿ ಇಂದು ಆರ್ಯನ್​ ಪರ ವಕಾಲತ್ತು ನಡೆಸುವುದಾಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಮುನ್ನ ಎರಡು ಬಾರಿ ಅಂದರೆ ಮ್ಯಾಜಿಸ್ಟ್ರೇಟ್​ ಕೋರ್ಟಿನಲ್ಲಿ ಮತ್ತು ಎನ್​ಡಿಪಿಎಸ್​ ವಿಶೇಷ ನ್ಯಾಯಾಲಯದಲ್ಲಿ ಆರ್ಯನ್​ ಖಾನ್​ರ ಜಾಮೀನು ಅರ್ಜಿಗಳು ವಜಾ ಆಗಿವೆ. ಕೆಳನ್ಯಾಯಾಲಯಗಳಲ್ಲಿ ಕ್ರಿಮಿನಲ್​ ಕೇಸುಗಳ ತಜ್ಞರೆನ್ನಲಾದ ಅಮಿತ್​ ದೇಸಾಯಿ ಮತ್ತು ಸತೀಶ್​ ಮಾನೆಶಿಂಧೆ, ಆರ್ಯನ್​ ಪರ ವಕಾಲತ್ತು ವಹಿಸಿದ್ದರು. ಇದೀಗ ವಿಶೇಷ ನ್ಯಾಯಾಲಯವು ಅ.20 ರಂದು ಜಾಮೀನು ನಿರಾಕರಿಸಿ ಹೊರಡಿಸಿದ್ದ ಆದೇಶದ ವಿರುದ್ಧ ಆರ್ಯನ್​ ಪರವಾಗಿ ಸಲ್ಲಿಸಿರುವ ಅಪೀಲಿನ ವಿಚಾರಣೆ ನಡೆಯಲಿದ್ದು, ಏನು ನಿರ್ಧಾರವಾಗುತ್ತದೆ ಎಂದು ಕಾದುನೋಡಬೇಕಿದೆ.

Gayathri SG

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

24 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

33 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

46 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

1 hour ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

1 hour ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago