ಮಹಾರಾಷ್ಟ್ರ: ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶುಕ್ರವಾರ ಮೃತಪಟ್ಟವರ ಸಂಖ್ಯೆ 100–110ಕ್ಕೆ ಏರಿಕೆಯಾಗಿದೆ.
ಇನ್ನೂ ಕರಾವಳಿಯ ರಾಯಗಡ ಜಿಲ್ಲೆಯಲ್ಲಿ ನಡೆದ ಭೂಕುಸಿತದ 50ಮಂದಿ ಸಾವನ್ನಪ್ಪಿದ್ದು, ಇನ್ನೂ 50 ಮಂದಿ ಮಣ್ಣಿನಡಿಯಲ್ಲಿ ಸಿಲಿಕಿದ್ದಾರೆ ಎನ್ನಲಾಗಿದೆ.
ರಾಯಗಡ ಜಿಲ್ಲೆಯ ಮಹಾಡ್ ತಾಲ್ಲೂಕಿನ ತಲಾಯ್ ಗ್ರಾಮದಲ್ಲಿ ಗುರುವಾರ ರಾತ್ರಿ ಭೂಕುಸಿತ ಸಂಭವಿಸಿತ್ತು. 50–60 ಮೀಟರ್ ಎತ್ತರದ ಗುಡ್ಡವು ನಿರಂತರ ಮಳೆಯಿಂದಾಗಿ ಕುಸಿದಿತ್ತು. ರತ್ನಾಗಿರಿ ಜಿಲ್ಲೆಯಲ್ಲಿಯೂ ಭೂಕುಸಿತ ಉಂಟಾಗಿದ್ದು 10 ಮಂದಿ ಮಣ್ಣಿನಡಿ ಸಿಲುಕಿರಬಹುದು ಎಂದು ಹೇಳಲಾಗಿದೆ.