ಮುಂಬೈ : ಇಲ್ಲಿನ ಪರೇಲ್ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಅಗ್ನಿಶಾಮಕ ಇಲಾಖೆಯ ಪ್ರಕಾರ, ಆ ವ್ಯಕ್ತಿ ಕಟ್ಟಡದ 19ನೇ ಮಹಡಿಯಿಂದ ಜಿಗಿದಿದ್ದಾನೆ ಎನ್ನಲಾಗ್ತಿದೆ. ಇನ್ನು ಮೃತನನ್ನ ಅರುಣ್ ತಿವಾರಿ ಎಂದು ಗುರುತಿಸಲಾಗಿದೆ. ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಮುಂಬೈ ಅಗ್ನಿಶಾಮಕ ಇಲಾಖೆಯ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕರಿ ರಸ್ತೆಯ ಅವಿಘ್ನಾ ಪಾರ್ಕ್ ಅಪಾರ್ಟ್ಮೆಂಟ್ʼನಲ್ಲಿ ಲೆವೆಲ್ ತ್ರೀನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಂದ್ಹಾಗೆ, ಅಗ್ನಿ ಅವಘಡಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ.