ಮುಂಬೈ: ಮರಾಠ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಕರೆ ನೀಡಲಾಗಿದ್ದ ಹೋರಾಟ ಹಾಗೂ ಉಪವಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮನೋಜ್ ಜಾರಂಗೆ ತಿಳಿಸಿದ್ದಾರೆ.
ಏಕನಾಥ್ ಶಿಂಧೆ ಸಂಪುಟದ ನಾಲ್ವರು ಸಚಿವರು ಮನೋಜ್ ಜಾರಂಗೆ ಅವರನ್ನು ಸರ್ಕಾರದ ವತಿಯಿಂದ ಭೇಟಿ ಮಾಡಿ ಭರವಸೆ ನೀಡಿದ ಬಳಿಕ ಉಪವಾಸ ಸತ್ಯಾಗ್ರಹವನ್ನು ಹಾಗೂ ಕರೆ ನೀಡಲಾಗಿದ್ದ ಹೋರಾಟವನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ.
ಸರ್ಕಾರ ಕೊಟ್ಟಿರುವ ಭರವಸೆಗಳನ್ನು ಈಡೇರಿಸಲು ಕನಿಷ್ಠ ಎಂದರು ಎರಡು ತಿಂಗಳ ಸಮಯ ಬೇಕು ಅಲ್ಲಿಯವರೆಗೂ ಕಾದು ನೋಡುತ್ತೇವೆ. ಒಂದು ವೇಳೆ ಸರ್ಕಾರ ಕೊಟ್ಟಿರುವ ಮಾತನ್ನು ಉಳಿಸಕೊಳ್ಳದಿದ್ದರೆ ನಾವು ನಮ್ಮ ಹೋರಾಟವನ್ನು ಪ್ರಾರಂಭಿಸುತ್ತೇವೆ. ಆದರೆ, ಮುಂದಿನ ಬಾರಿ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತೇವೆ. ಅಗತ್ಯ ವಸ್ತುಗಳ ಪೂರೈಕೆಯನ್ನು ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.