ಮುಂಬೈ: ಇಂದು ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿ ಆಗಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ ಹೈವೋಲ್ಟೇಜ್ ಪಂದ್ಯದಲ್ಲಿ ದೂಳಿಪಟ ಹಾರಿಸುವ ಭರವಸೆಯಲ್ಲಿವೆ.
ಸತತ 2 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್ ಇಂದು ಗೆಲ್ಲುವ ಭರವಸೆ ಹೊತ್ತು ಬಂದಿದೆ.ಈ ಮಧ್ಯೆ ಮುಂಬೈ ಇಂಡಿಯನ್ಸ್ಗೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಎಂಟ್ರಿ ನೀಡಿದ್ದಾರೆ ಎಂದು ಸುದ್ದಿಯಾಗಿದೆ. ಹೀಗಾಗಿ ಸೂರ್ಯ ಆಗಮನದಿಂದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ತಂಡಕ್ಕೆ ಆನೆಬಲ ಬಂದಿದೆ.
ಕಳೆದ 2 ಪಂದ್ಯಗಳಲ್ಲೂ ಸೂರ್ಯಕುಮಾರ್ ಯಾದವ್ ಆಡಿರಲಿಲ್ಲ. ಹಾಗಾಗಿ ಈ ಬಾರಿ ರಾಜಸ್ಥಾನ್ ವಿರುದ್ಧ ಪಂದ್ಯದಿಂದ ಸೂರ್ಯ ಕಮ್ಬ್ಯಾಕ್ ಮಾಡಲಿದ್ದು, ಮುಂಬೈ ಇಂಡಿಯನ್ಸ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬಲ ಹೆಚ್ಚಾಗಿದೆ. ಸರ್ಜರಿ ಬಳಿಕ ಇನ್ನೂ ಚೇತರಿಸಿಕೊಳ್ಳದ ಕಾರಣ ಸೂರ್ಯ ಇತ್ತೀಚೆಗೆ ಹಾರ್ಟ್ ಇಮೋಜಿಯನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು.