ಮುಂಬಯಿ: ಕಾಸರಗೋಡು ಉಪ್ಪಳ ಅಲ್ಲಿನ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಮಠಾಧಿಪತಿ ಶ್ರೀ ಯೋಗನಂದ ಸರಸ್ವತಿ ಸ್ವಾಮೀಜಿ ಅವರು ಇಂದಿಲ್ಲಿ ಉಪನಗರ ಥಾಣೆಗೆ ಪಾದಾರ್ಪಣೆಗೈದು ಶ್ರೀ ನಿತ್ಯಾನಂದ ಯೋಗಾಶ್ರಮ ಸಮಿತಿ ಮುಂಬಯಿ ಇದರ ಭಕ್ತರ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಅವರಿಗೆ ಆರತಿ ಬೆಳಗಿಸಿ ಅನುಗ್ರಹಿಸಿದರು.
ಯೋಗಾಶ್ರಮ ಸಮಿತಿ ಮುಂಬಯಿ ಇದರ ಕಾರ್ಯದರ್ಶಿ ಹರೀಶ್ ಕೆ.ಚೇವಾರ್ ಅವರು ಥಾಣೆ ಕಾಪೂರ್ ಬಾವ್ಡಿ ಅಲ್ಲಿನ ಸಮಿತಿಯ ಕೋಶಾಧಿಕಾರಿ ಸದಸ್ಯ, ಭಾರತ್ ಬ್ಯಾಂಕ್ನ ಮಾಜಿ ನಿರ್ದೇಶಕ ಅಶೋಕ್ ಎಂ.ಕೋಟ್ಯಾನ್ ಅವರ ಕೋಸ್ಮಸ್ ಹಾಬಿಟಾಟ್ ನಿವಾಸದಲ್ಲಿ ಆಯೋಜಿಸಿದ್ದ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೆರೆದ ಭಗವದ್ಭಕ್ತರಿಗೆ ಹರಸಿದರು.
ಈ ಸಂದರ್ಭದಲಿ ಶ್ರೀ ನಿತ್ಯಾನಂದ ಯೋಗಾಶ್ರಮ ಸಮಿತಿ ಮುಂಬಯಿ ಸಮಿತಿಯ ಅಧ್ಯಕ್ಷ ರಾಜೇಶ್ ರೈ, ಮಾಜಿ ಗೌ|ಪ್ರ|ಕಾರ್ಯದರ್ಶಿ ನಿತ್ಯಾನಂದ ಡಿ.ಕೋಟ್ಯಾನ್, ತೋನ್ಸೆ ಸಂಜೀವ ಪೂಜಾರಿ, ಯಶೋಧಾ ಭಟ್ಟಿಪಾಡಿ, ರಮೇಶ್ ಕೋಟ್ಯಾನ್, ಜಯರಾಮ ಪೂಜಾರಿ, ಎಸ್.ಎಸ್ ಪೂಜಾರಿ.ಎಸ್.ಸುಧಾಕರ್, ಜಾನಕಿ ಅಶೋಕ್ ಕೋಟ್ಯಾನ್, ಅಜಯ್ ಎ. ಕೋಟ್ಯಾನ್, ಅಖಿಲ್ ಎ.ಕೋಟ್ಯಾನ್ ಸೇರಿದಂತೆ ಸಮಿತಿಯ ಅನೇಕ ಸದಸ್ಯರು, ಧಾರ್ಮಿಕ ಮುಂದಾಳುಗಳು ಪಾಲ್ಗೊಂಡು ಭಜನೆಗೈದರು. ಶ್ರೀಗಳು ಮಂತ್ರಾಕ್ಷತೆ, ಪ್ರಸಾದ ನೀಡಿ ಹರಸಿದರು.
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…
ಯಮುನೋತ್ರಿ, ಗಂಗೋತ್ರಿ, ಕೇದರ್ನಾಥ್ ಮತ್ತು ಬದರಿನಾಥ್ ಪವಿತ್ರ ಚಾರ್ ಧಾಮ್ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…
ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್ ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.
ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…
ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಆರ್ಜೆಡಿ ನಾಯಕ ತೇಜಸ್ವಿ…