ಹೊರನಾಡ ಕನ್ನಡಿಗರು

ದುಬೈಯಲ್ಲಿ ನೂರೇ ಅಜ್ಮೀರ್ ಆಮಂತ್ರಣ ಪತ್ರಿಕೆ ಅನಾವರಣ

ದುಬೈ : ಎಸ್ ಕೆ ಎಸ್ ಎಸ್ ಎಫ್ ಯು ಎ ಇ ಸಮಿತಿ ಹಾಗು ವಿಖಾಯ ಯು ಎ ಇ ಜಂಟಿ ಆಶ್ರಯದಲ್ಲಿ ದುಬೈ ವುಮೆನ್ಸ್ ಅಸೋಸಿಯೇಷನ್ ದೇರಾ ದಲ್ಲಿ  2022 ಸೆಪ್ಟೆಂಬರ್ 18 ರಂದು ನಡೆಯಲಿರುವ  ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ  ಸ್ಪೂರ್ತಿದಾಯಕ ಪಯಣ ಎರಡನೇ ವಾರ್ಷಿಕ ಸಮಾರಂಭದ ಆಮಂತ್ರಣ ಪತ್ರಿಕೆ ಅನಾವರಣ ಕಾರ್ಯಕ್ರಮವು ಸಯ್ಯದ್ ಆಸ್ಕರ್ ಅಲಿ ತಂಙಲ್  ಕೋಲ್ಪೆ ರವರ ನಿವಾಸದಲ್ಲಿ ನಡೆಯಿತು.

ನೂರೇ  ಅಜ್ಮೀರ್ ಸ್ವಾಗತ ಸಮಿತಿ ಛೇರ್ಮನ್ ಸಿರಾಜ್ ಬಿಸಿ ರೋಡ್ ರವರು ಸಯ್ಯದ್ ಆಸ್ಕರ್ ಅಲಿ ತಂಙಲ್  ಕೋಲ್ಪೆ , ಅಬ್ದುಲ್ ಸಲಾಂ ಬಪ್ಪಳಿಗೆ , ಷರೀಫ್ ಕೊಡಿನೀರ್, ಬದ್ರುದ್ದೀನ್ ಹೆಂತಾರ್, ಸ್ವಾಗತ ಸಮಿತಿ ಕೋಶಾಧಿಕಾರಿ ಅಲಿ ಈಶ್ವರಮಂಗಿಲ  ರವರಿಗೆ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸುವ ಮೂಲಕ ಅನಾವರಣ ಗೊಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ  ಎಸ್ ಕೆ ಎಸ್ ಎಸ್ ಎಫ್ ವಿಖಾಯ ಯು ಎ ಇ ಛೇರ್ಮನ್ ನವಾಝ್ ಬಿಸಿ ರೋಡ್ ರವರು ಮಾತನಾಡುತ್ತಾ , ಉದ್ದೇಶಿತ ಕಾರ್ಯಕ್ರಮದಲ್ಲಿ ಸುಮಾರು ಒಂದು ಸಾವಿರಕ್ಕಿಂತಲೂ ಅಧಿಕ  ದೀನೀ ಸ್ನೇಹಿಗಳು ಭಾಗವಹಿಸುವ ನಿರೀಕ್ಷೆ ಇದ್ದು , ಅದಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಸ್ವಾಗತ ಸಮಿತಿಯು ಮಾಡಿಕೊಂಡಿದ್ದು,  ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ಯು ಎ ಇ ಯ ಚರಿತ್ರೆಯಲ್ಲಿ ಬರೆದಿಡಬೇಕಾದ ಕಾರ್ಯಕ್ರಮವಾಗಿ ಬದಲಾಯಿಸಲು ತಾವೆಲ್ಲರು  ಸಹಕರಿಸುವಂತೆ ಕೇಳಿಕೊಂಡರು.

ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಸಯ್ಯದ್ ಆಸ್ಕರ್ ಅಲಿ ತಂಙಲ್  ಕೋಲ್ಪೆ ಮಾತನಾಡುತ್ತಾ, ನೂರೇ ಅಜ್ಮೀರ್  ಕಾರ್ಯಕ್ರಮವು ಪ್ರಥಮವಾಗಿ ಯು ಎ ಇ  ಯಲ್ಲಿ ಆಯೋಜಿಸುತ್ತಿದ್ದು , ಹಲವಾರು ದೀನೀ ಸ್ನೇಹಿಗಳು ಸಂಗಮಿಸುವ ಮಹಾ ಕಾರ್ಯಕ್ರಮವಾಗಿದ್ದು , ಉದ್ದೇಶಿಸಿದಂತೆ ಉತ್ತಮವಾಗಿ ಮೂಡಿ ಬರಲಿ ಎಂದು ಶುಭ ಹಾರೈಸಿದರು.

ನೂರೇ ಅಜ್ಮೀರ್  ಸ್ವಾಗತ ಸಮಿತಿ ಛೇರ್ಮನ್ ಸಿರಾಜ್ ಬಿಸಿ ರೋಡ್ ರವರು ಕಾರ್ಯಕ್ರಮದ ರೂಪುರೇಷ, ಕಾರ್ಯ ಯೋಜನೆಗಳ ಕುರಿತು ವಿವರಿಸಿ ಸರ್ವರ ಸಹಕಾರವನ್ನು ಕೋರಿದರು. ಈ ಸಂಧರ್ಭದಲ್ಲಿ , ಅಶ್ರಫ್  ತಂಙಲ್  ಉದ್ಯಾವರ ,   ಅಝೀಝ್ ಸೊಂಪಾಡಿ, , ನವಾಝ್ ಕಟ್ಟತ್ತಾರ್, ಅಕ್ಬರ್ ಹಂಡೇಲ್ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಝೀಝ್ ಸೊಂಪಾಡಿ ಸ್ವಾಗತಿಸಿ ನವಾಝ್ ಕಟ್ಟತ್ತಾರ್ ವಂದಿಸಿದರು.

Sneha Gowda

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

20 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

30 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

35 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

43 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

52 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

56 mins ago